ಸಮಾಜದಿಂದ ಮೌಢ್ಯಗಳನ್ನು ದೂರ ಮಾಡುವ ಉದ್ದೇಶದಿಂದ ಮೌಢ್ಯ ಪ್ರತಿಬಂಧಕ ಕಾಯ್ದೆ ಜಾರಿಗೆ ರಾಜ್ಯ ಸರಕಾರ ಮುಂದಾಗಿತ್ತು. ಆದರೆ, ಈ ಕಾಯ್ದೆಗೆ ರಾಜ್ಯಾದ್ಯಂತ ಹಲವರಿಂದ ವಿರೋಧ ವ್ಯಕ್ತವಾದ ಹಿನ್ನೆಲೆಯಲ್ಲಿ ಕಾಯ್ದೆಯನ್ನು ಕೈಬಿಡಲಾಗಿತ್ತು. ತಮ್ಮ ಆಡಳಿತ ಅವದಿಯಲ್ಲಿ ಮೂಢನಂಬಿಕೆ ಪ್ರತಿಬಂಧಕ ಕಾಯ್ದೆ ಜಾರಿಯಾಗಲಿಲ್ಲ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ವಿಷಾದ ವ್ಯಕ್ತಪಡಿಸಿದ್ದಾರೆ.