ನಕಲಿ ಪದವಿ ಪಡೆದ ಆರೋಪ: ಮಾಹಿತಿ ನೀಡುವಂತೆ ಸಚಿವರಿಗೆ ಸೂಚಿಸಿದ ಕೇಜ್ರಿವಾಲ್

ಮಂಗಳವಾರ, 28 ಏಪ್ರಿಲ್ 2015 (16:02 IST)
ನಕಲಿ ಕಾನೂನು ಪದವಿಯನ್ನು ಪಡೆದಿದ್ದಾರೆ ಎಂಬ ಆರೋಪ ಕೇಳಿ ಬಂದ ಹಿನ್ನೆಲೆಯಲ್ಲಿ ದೆಹಲಿ ಸರ್ಕಾರದ ಕಾನೂನು ಸಚಿವ ಜಿತೇಂದ್ರ ಸಿಂಗ್ ತೋಮರ್ ಅವರಿಗೆ ಸಂಪೂರ್ಣ ಮಾಹಿತಿ ನೀಡುವಂತೆ ಮುಖ್ಯಮಂತ್ರಿ ಅರವಿಂದ್ ಕೇಜ್ರಿವಾಲ್ ಅವರು ಇಂದು ಸೂಚಿಸಿದ್ದಾರೆ. 
 
ಪ್ರಕರಣದ ಹಿನ್ನೆಲೆ: ನಕಲಿ ಕಾನೂನು ಪದವಿಯನ್ನು ಪಡೆದಿದ್ದಾರೆ ಎಂದು ಆರೋಪಿಸಿ ಕಾಂಗ್ರೆಸ್ ಪಕ್ಷದ ಸಾವಿರಾರು ಕಾರ್ಯಕರ್ತರು ರಾಷ್ಟ್ರ ರಾಜಧಾನಿ ದೆಹಲಿಯಾದ್ಯಂತ ಪ್ರತಿಭಟನೆ ನಡೆಸುತ್ತಿದ್ದರು. ಈ ಹಿನ್ನೆಲೆಯಲ್ಲಿ ಕೂಡಲೇ ಎಚ್ಚೆತ್ತುಕೊಂಡ ಸಿಎಂ ಕೇಜ್ರಿವಾಲ್ ಅವರು, ವಿಷಯಕ್ಕೆ ಸಂಬಂಧಿಸಿದಂತೆ ಸೂಕ್ತವಾದ ಉತ್ತರ ನೀಡುವಂತೆ ಸಚಿವರಿಗೆ ಸೂಚಿಸಿದ್ದಾರೆ.  
 
ಈ ಹಿಂದೆ ದೆಹಲಿಯಲ್ಲಿ ಬಹುಮತ ಪಡೆದು ಅಧಿಕಾರದ ಗದ್ದುಗೆ ಏರಿದ್ದ ಎಎಪಿ ಪಕ್ವ ಸರ್ಕಾರ ರಚಿಸುತ್ತಿದ್ದ ವೇಳೆಯಲ್ಲಿ ಪಕ್ಷದ ಶಾಸಕ ಜಿತೇಂದ್ರ ಸಿಂಗ್ ತೋಮರ್ ಅವರು ಕಾನೂನು ಪದವಿಯನ್ನು ಪಡೆದಿದ್ದಾರೆ ಎಂಬ ಕಾರಣದಿಂದ ತೋಮರ್ ಅವರಿಗೆ ಸಂಪುಟದಲ್ಲಿ ಸಚಿವ ಸ್ಥಾನವನ್ನು ನೀಡಲಾಗಿತ್ತು. ಆದರೆ ಪ್ರಸ್ತುತ ಕಾಂಗ್ರೆಸ್ ಕಾರ್ಯಕರ್ತರಿಂದ ಅವರ ಶಿಕ್ಷಣದ ಬಗ್ಗೆ ಅಪಸ್ವರ ಕೇಳಿ ಬಂದಿರುವ ಹಿನ್ನೆಲೆಯಲ್ಲಿ ಸಿಎಂ ಈ ನಿರ್ಧಾರವನ್ನು ಕೈಗೊಂಡಿದ್ದಾರೆ.  

ವೆಬ್ದುನಿಯಾವನ್ನು ಓದಿ