ಜಿಲ್ಲೆಯ ಉಪ ವಿಭಾಗಾಧಿಕಾರಿ ಡಾ.ರಾಜೇಂದ್ರ ಪ್ರಸಾದ್ ಮತ್ತು ತಹಶಿಲ್ದಾರ್ ಮಂಜಪ್ಪ ಅವರ ನೇತೃತ್ವದಲ್ಲಿ ತೆರವು ಕಾರ್ಯ ನಡೆಸಲಾಗುತ್ತಿದ್ದು, ಈಗಾಗಲೇ ಈಗಲ್ಟನ್ ಗಾಲ್ಫ್ ರೆಸಾರ್ಟ್ ಬಳಿ ಜಮಾಯಿಸಿದ್ದಾರೆ. ಅಲ್ಲದೆ ಕೋರ್ಟ್ ಆದೇಶದಂತೆ 28.32 ಎಕರೆ ಭೂಮಿಯನ್ನು ತೆರವುಗೊಳಿಸಲು ಮುಂದಾಗಿದ್ದು, ಸಮೀಕ್ಷೆ ನಡೆಸುತ್ತಿದ್ದಾರೆ.
ಇನ್ನು ಈ ಪ್ರಕರಣ ಸಂಬಂಧ ಆದೇಶ ನೀಡಿದ್ದ ಕೋರ್ಟ್, 100 ಎಕರೆಯ ಪೈಕಿ 28.32 ಎಕರೆಯ ಭೂಮಿಯನ್ನು ತೆರವುಗೊಳಿಸಿ ವಶಕ್ಕೆ ಪಡೆಯಿರಿ. ಇನ್ನುಳಿದ 77.19 ಎಕರೆ ಭೂಮಿಗೆ ಮಾರುಕಟ್ಟೆ ದರ ನಿಗದಿಗೊಳಿಸಿ ಅದರಂತೆ ಹಣವನ್ನು ವಸೂಲಿ ಮಾಡಿ ಎಂದು ಆದೇಶಿಸಿತ್ತು. ಕೋರ್ಟ್ ಆದೇಶದಂತೆ ಈ ಹಿಂದೆ ಇದ್ದ ಜಿಲ್ಲೆಯ ಜಿಲ್ಲಾಧಿಕಾರಿಗಳು 77.19 ಎಕರೆ ಭೂಮಿಗೆ ಮಾರುಕಟ್ಟೆ ದರದಂತೆ 980 ಕೋಟಿ ರೂ. ಆಗಲಿದೆ ಎಂದು ಅಂದಾಜಿಸಿ ಸರ್ಕಾರದ ಕಂದಾಯ ಇಲಾಖೆಯ ಮುಖ್ಯ ಕಾರ್ಯದರ್ಶಿ ಅವರಿಗೆ ವರದಿಯನ್ನೂ ಸಲ್ಲಿಸಿದ್ದರು.