ಡಿಕೆಶಿ ಮೇಲೆ ಇಡಿ ತನಿಖೆ ರಾಜಕೀಯ ಪ್ರೇರಿತ ಅಲ್ಲ-ಡಿಸಿಎಂ ಲಕ್ಷ್ಮಣ ಸವದಿ

ಶುಕ್ರವಾರ, 30 ಆಗಸ್ಟ್ 2019 (14:03 IST)
ಹುಬ್ಬಳ್ಳಿ: ಡಿಕೆಶಿ ಮೇಲೆ ಇಡಿ ತನಿಖೆ ರಾಜಕೀಯ ಪ್ರೇರಿತ ಅಲ್ಲ ಎಂದು ಉಪಮುಖ್ಯಮಂತ್ರಿ ಲಕ್ಷ್ಮಣ ಸವದಿ ಹೇಳಿದ್ದಾರೆ.




ಡಿಕೆ ಶಿವಕುಮಾರಿಗೆ ಇಡಿ ಅಧಿಕಾರಿಗಳು ಸಮನ್ಸ್ ಜಾರಿ ಮಾಡಿರುವ ಕುರಿತು ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಜಾರಿ ನಿರ್ದೇಶನಾಲಯ ತನ್ನ ಕೆಲಸ ಮಾಡುತ್ತಿದೆ.  ಡಿಕೆಶಿ ಮೇಲೆ ಇಡಿ ತನಿಖೆ ರಾಜಕೀಯ ಪ್ರೇರಿತ ಅಲ್ಲ ಎಂದು ಹೇಳಿದ್ದಾರೆ.


ಸೋತ ಲಕ್ಷ್ಮಣ ಸವದಿಗೆ ಡಿಸಿಎಂ ಸ್ಥಾನ ನೀಡಿದ್ದಾರೆ. ಬಿಜೆಪಿಯವರಿಗೆ ಮಾನ ಮರ್ಯಾದೆ ಇಲ್ಲ ಎಂದ ಸಿದ್ದರಾಮಯ್ಯ ಹೇಳಿಕೆಗೆ ಪ್ರತಿಕ್ರಿಯೆ ನೀಡಿದ ಅವರು, ಸಿದ್ದರಾಮಯ್ಯ ರವರ ಹೇಳಿಕೆಗಲ್ಲ ಪ್ರತಿಕ್ರಿಯೆ ನೀಡಲ್ಲ. ಅವರು ಇನ್ನೆನ್ ಹೇಳೋಕ್ಕಾಗುತ್ತೆ ಅದನ್ನೆ ಹೇಳೋದು. ಪಕ್ಷದ ವರಿಷ್ಠರು ನೀಡಿದ ಜವಬ್ದಾರಿಯನ್ನು ನಿಭಾಯಿಸುತ್ತೇನೆ ಎಂದು ಅವರು ತಿಳಿಸಿದ್ದಾರೆ.

ವೆಬ್ದುನಿಯಾವನ್ನು ಓದಿ

ಸಂಬಂಧಿಸಿದ ಸುದ್ದಿ