2011ರಲ್ಲಿ ನಡೆದ ಉಪಚುನಾವಣೆ ಸಂದರ್ಭದಲ್ಲಿ ಕ್ಷೇತ್ರದ ಸಂಗನಕಲ್ಲು ಗ್ರಾಮದ ದೇವಸ್ಥಾನವೊಂದರಲ್ಲಿ ಪ್ರಚಾರ ಮಾಡಿದ್ದರು ಎಂದು ಈಶ್ವರಪ್ಪ, ಅಂದಿನ ಬಿಜೆಪಿ ಅಭ್ಯರ್ಥಿ ಗಾದಿಲಿಂಗಪ್ಪ, ಬಿಜೆಪಿ ಮುಖಂಡರಾದ ಶಶೀಲ್ ನಮೋಶಿ, ಸಂಗನಕಲ್, ಇಂದು ಶೇಖರ್, ಶಿವರಾಮರೆಡ್ಡಿ ಸೇರಿದಂತೆ 8 ಜನರ ವಿರುದ್ಧ ಧಾರ್ಮಿಕ ಸ್ಥಳಗಳ ದುರುಪಯೋಗ ತಡೆ ಕಾಯ್ದೆ ಅನ್ವಯ ಬಳ್ಳಾರಿ ಗ್ರಾಮೀಣ ಠಾಣೆಯಲ್ಲಿ ಪ್ರಕರಣ ದಾಖಲಾಗಿತ್ತು.