ಬೆಂಗಳೂರಿಗೆ ದೌಡಾಯಿಸಿದ ಚುನಾವಣಾಧಿಕಾರಿಗಳು
ಒಪಿ ರಾವತ್ ಮತ್ತು ಅಧಿಕಾರಿಗಳ ತಂಡ ರಾಜ್ಯ ಚುನಾವಣಾ ಆಯೋಗದ ಜತೆಗೂಡಿ ಇಲ್ಲಿ ನಡೆಸಬೇಕಿರುವ ಸಿದ್ಧತೆಗಳ ಬಗ್ಗೆ ಪರಿಶೀಲನೆ ನಡೆಸಲಿದ್ದಾರೆ. ಪೂರ್ವ ತಯಾರಿಗಳ ಬಗ್ಗೆ ಮುಖ್ಯ ಚುನಾವಣಾಧಿಕಾರಿ ಮೇಲ್ವಿಚಾರಣೆ ನಡೆಸಲಿದ್ದಾರೆ.
ಈ ವೇಳೆ ರಾಜ್ಯ ಮುಖ್ಯ ಕಾರ್ಯದರ್ಶಿ, ಮುಖ್ಯ ಪೊಲೀಸ್ ಆಯುಕ್ತರು, ರಾಜ್ಯ ಮುಖ್ಯ ಚುನಾವಣಾಧಿಕಾರಿಗಳೊಂದಿಗೆ ಸಭೆ ನಡೆಸಲಿರುವ ಒ ಪಿ ರಾವತ್, ಚುನಾವಣೆ ಸಂದರ್ಭದಲ್ಲಿ ಕೈಗೊಳ್ಳಬೇಕಾದ ಕ್ರಮಗಳ ಬಗ್ಗೆ ಸಲಹೆ, ಸೂಚನೆ ನೀಡಲಿದ್ದಾರೆ.