ಪ್ರಕರಣವೇನು?
ಇಂದು ಅಧ್ಯಕ್ಷ ಹಾಗೂ ಉಪಾಧ್ಯಕ್ಷ ಸ್ಥಾನಕ್ಕೆ ಇಂದು ಗೌಪ್ಯ ಚುನಾವಣೆ ನಡೆಸಲಾಗಿತ್ತು. ಬಳಿಕ ಚುನಾವಣಾಧಿಕಾರಿ ಪ್ರಕಾಶ್ ಅವರು ಅಧ್ಯಕ್ಷ ಸ್ಥಾನಕ್ಕೆ ಆಯ್ಕೆಯಾಗಿದ್ದ ಕಾಂಗ್ರೆಸ್ ಅಭ್ಯರ್ಥಿಯ ಹೆಸರನ್ನು ಘೋಷಿಸಿದರು. ಇದರಿಂದ ರೊಚ್ಚಿಗೆದ್ದ ಜೆಡಿಎಸ್ ಬೆಂಬಲಿಗರು ಕಾಂಗ್ರೆಸ್ಗಿಂತ ನಾವೇ ಹೆಚ್ಚು ಸದಸ್ಯ ಬಲವನ್ನು ಹೊಂದಿದ್ದೇವೆ. ಹೀಗಿರುವಾಗ ಕಾಂಗ್ರೆಸ್ ಅಭ್ಯರ್ಥಿ ಆಯ್ಕೆಯಾಗಲು ಹೇಗೆ ಸಾಥ್ಯ ಎಂದು ಉದ್ರಿಕ್ತಗೊಂಡು ಕಚೇರಿಯ ಮೇಲೆ ಕಲ್ಲು ತೂರಾಟ ನಡೆಸಿದರು. ಅಲ್ಲದೆ ಚುನಾವಣಾಧಿಕಾರಿ ಪ್ರಕಾಶ್ ಮೇಲೆಯೂ ಕೂಡ ಹಲ್ಲೆ ನಡೆಸಲು ಯತ್ನಿಸಿದರು ಎನ್ನಲಾಗಿದೆ.