ಮಹದೇವಪುರ ವಲಯ ವ್ಯಾಪ್ತಿಯಲ್ಲಿ ಒತ್ತುವರಿ ತೆರವು ಕಾರ್ಯಾಚರಣೆ

ಸೋಮವಾರ, 30 ಜನವರಿ 2023 (19:58 IST)
ಬಿಬಿಎಂಪಿಯ ಮಹದೇವಪುರ ವಲಯ ವ್ಯಾಪ್ತಿಯಲ್ಲಿ ರಾಜಕಾಲುವೆ ಒತ್ತುವರಿ ತೆರವು ಕಾರ್ಯಾಚರಣೆಯನ್ನು ಮುಂದುವರಿಸಲಾಗಿದ್ದು, *ಇಂದು ಚಿನ್ನಪ್ಪನಹಳ್ಳಿ ಹಾಗೂ ಸಾದರಮಂಗಳ ಸೇರಿದಂತೆ ಒಟ್ಟು 4 ಒತ್ತುವರಿಗಳ ತೆರವು ಕಾರ್ಯಾಚರಣೆಯನ್ನು ನಡೆಸಲಾಗಿದೆ.  ದೊಡ್ಡಾನೆಕುಂದಿ ವಾರ್ಡ್ನ ಚಿನ್ನಪ್ಪನಹಳ್ಳಿ ವ್ಯಾಪ್ತಿಯಲ್ಲಿ ರಾಜಕಾಲುವೆಯ ಮೇಲೆ ನಿರ್ಮಿಸಿದ್ದ 3 ಕಟ್ಟಡಗಳನ್ನು ನೆಲಸಮಗೊಳಿಸುವ ಕಾರ್ಯ ಪ್ರಗತಿಯಲ್ಲಿದ್ದು, ಜಿ+2 ಕಟ್ಟಡವನ್ನು ಈಗಾಗಲೇ ನೆಲಸಮಗೊಳಿಸಲಾಗಿದೆ. ಇನ್ನೆರಡು ಕಟ್ಟಡಗಳ ತೆರವು ಕಾರ್ಯಾಚರಣೆಯು ಪ್ರಗತಿಯಲ್ಲಿದ್ದು, ನಾಳೆ ಬಾಕಿ ತೆರವು ಕಾರ್ಯಾಚರಣೆಯನ್ನು ಮುಂದುವರಿಸಲಿದೆ. ಇನ್ನು ಹೂಡಿ ವಾರ್ಡ್ ಸಾದರ ಮಂಗಳ ವ್ಯಾಪ್ತಿಯಲ್ಲಿ ರಾಜಕಾಲುವೆ ಭಾಗದಲ್ಲಿ ಒತ್ತುವರಿ ಮಾಡಿಕೊಂಡಿದ್ದ ಸುಮಾರು 8 ಮೀಟರ್ ಉದ್ದದ ಕಾಂಪೌಂಡ್ ಗೋಡೆಯನ್ನು ಇಂದು ಜೆಸಿಬಿ ಮೂಲಕ ತೆರವುಗೊಳಿಸಲಾಗಿದೆ. ತೆರವು ಕಾರ್ಯಾಚರಣೆಯ ವೇಳೆ 1 ಹಿಟಾಚಿ, 1 ಜೆಸಿಬಿ, 1 ಗ್ಯಾಸ್ ಕಟರ್, 1 ಟ್ರ್ಯಾಕ್ಟರ್, 10 ಸಿಬ್ಬಂದಿಗಳು ಕಾರ್ಯನಿರ್ವಹಿಸುತ್ತಿದ್ದು, ಸ್ಥಳದಲ್ಲಿ ಪಾಲಿಕೆಯ ಇಂಜಿನಿಯರ್ ಗಳು ಹಾಗೂ ಪೊಲೀಸ್ ಅಧಿಕಾರಿಗಳು ಉಪಸ್ಥಿತರಿದ್ದರು. 

ವೆಬ್ದುನಿಯಾವನ್ನು ಓದಿ

ಸಂಬಂಧಿಸಿದ ಸುದ್ದಿ