ಗೋಕಾಕ್ ಕ್ಷೇತ್ರದಲ್ಲಿ ಅನರ್ಹ ಶಾಸಕ ರಮೇಶ್ ಜಾರಕಿಹೊಳಿಯಿಂದ ಶಕ್ತಿ ಪ್ರದರ್ಶನ

ಶುಕ್ರವಾರ, 6 ಸೆಪ್ಟಂಬರ್ 2019 (11:22 IST)
ಗೋಕಾಕ್ : ರಮೇಶ್ ಜಾರಕಿಹೊಳಿ ರಾಜೀನಾಮೆ ನೀಡಿರುವ ಕ್ಷೇತ್ರಕ್ಕೆ ಉಪ ಚುನಾವಣೆ ನಡೆಯಲಿದ್ದು, ಈ ಹಿನ್ನಲೆಯಲ್ಲಿ ಅನರ್ಹ ಶಾಸಕ ರಮೇಶ್ ಜಾರಕಿಹೊಳಿ ಶಕ್ತಿ ಪ್ರದರ್ಶನಕ್ಕೆ ಮುಂದಾಗಿದ್ದಾರೆ ಎನ್ನಲಾಗಿದೆ.



ಗೋಕಾಕ್ ನಲ್ಲಿರುವ ರಮೇಶ್ ಜಾರಕಿಹೊಳಿ ಅವರ ನಿವಾಸದ ಬಳಿ ರಮೇಶ್ ಜಾರಕಿಹೊಳಿ ಅಭಿಮಾನಿ ಬಳಗದಿಂದ ಸಂಕಲ್ಪ ಸಮಾವೇಶ ಹಮ್ಮಿಕೊಳ್ಳಲಾಗಿದೆ. ರಮೇಶ್ ಅಳಿಯ ಅಂಬಿರಾವ್ ಪಾಟೀಲ್ ನೇತೃತ್ವದಲ್ಲಿ ನಾಳೆ ಬೆಳಿಗ್ಗೆ 11 ಗಂಟೆಗೆ ಸಮಾವೇಶ ಹಮ್ಮಿಕೊಳ್ಳಲಾಗಿದೆ.

 

ಈಗಾಗಲೇ ಗೋಕಾಕ್ ಕ್ಷೇತ್ರದಲ್ಲಿ ಮಾಜಿ ಸಿಎಂ ಸಿದ್ಧರಾಮಯ್ಯ ರೌಡ್ ಹಾಕುತ್ತಿದ್ದು, ಈ ಕ್ಷೇತ್ರದಲ್ಲಿ ಕಾಂಗ್ರೆಸ್ ಗೆಲುವಿಗೆ ತಂತ್ರ ರೂಪಿಸುತ್ತಿದ್ದಾರೆ. ಈ ಹಿನ್ನಲೆಯಲ್ಲಿ ಇದೀಗ ರಮೇಶ್ ಜಾರಕಿಹೊಳಿ ಸಮಾವೇಶ ನಡೆಸಿ ಶಕ್ತಿ ಪ್ರದರ್ಶನಕ್ಕೆ ಮುಂದಾಗಿದ್ದಾರೆ ಎನ್ನಲಾಗಿದೆ.

 

ವೆಬ್ದುನಿಯಾವನ್ನು ಓದಿ

ಸಂಬಂಧಿಸಿದ ಸುದ್ದಿ