ಸಾರಿಗೆ ಮುಷ್ಕರದ ನೇತಾರ ಕೋಡಿಹಳ್ಳಿ ಚಂದ್ರಶೇಖರ್ ಬಳಿ ಪರಿಹಾರ ಕೇಳಿದ ವಿದ್ಯಾರ್ಥಿನಿ

ಶುಕ್ರವಾರ, 9 ಏಪ್ರಿಲ್ 2021 (11:30 IST)
ಬೆಂಗಳೂರು: ಸಾರಿಗೆ ಮುಷ್ಕರದಿಂದಾಗಿ ತೊಂದರೆ ಅನುಭವಿಸುತ್ತಿರುವವರು ಜನಸಾಮನ್ಯರು. ಅದರಲ್ಲೂ ಪರೀಕ್ಷೆಗೆ ತೆರಳಬೇಕಾದ ವಿದ್ಯಾರ್ಥಿಗಳಿಗೆ ತೀವ್ರ ಸಮಸ್ಯೆಯಾಗುತ್ತಿದೆ.


ಈ ನಡುವೆ ತುಮಕೂರಿನ ಇಂಜಿನಿಯರಿಂಗ್ ಪದವಿ ವಿದ್ಯಾರ್ಥಿನಿಯೊಬ್ಬಳು ಮುಷ್ಕರದ ನೇತೃತ್ವ ವಹಿಸಿಕೊಂಡಿರುವ ಕೋಡಿಹಳ್ಳಿ ಚಂದ್ರಶೇಖರ್ ಗೆ 10 ಲಕ್ಷ ರೂ. ಪರಿಹಾರ ನೀಡುವಂತೆ ಲೀಗಲ್ ನೋಟಿಸ್ ನೀಡಿದ್ದಾಳೆ.

ಎರಡು ದಿನದಿಂದ ಖಾಸಗಿ ಬಸ್ ಗಳಲ್ಲಿ ದುಪ್ಪಟ್ಟು ಹಣ ಕೊಟ್ಟು ಸಂಚಾರ ಮಾಡುತ್ತಿದ್ದೇವೆ. ಹೀಗಾಗಿ ನಮಗೆ ಪರಿಹಾರ ಕೊಡಿ ಎಂದು ಬಿಎಂಟಿಸಿ ಎಂಡಿ ಮತ್ತು ಕೋಡಿಹಳ್ಳಿ ಚಂದ್ರಶೇಖರ್ ಗೆ ನೋಟಿಸ್ ನೀಡಿದ್ದಾಳೆ.

ವೆಬ್ದುನಿಯಾವನ್ನು ಓದಿ

ಸಂಬಂಧಿಸಿದ ಸುದ್ದಿ