ಬಿಎಸ್ ವೈ ಅವರ ಕುಟುಂಬ ರಾಜಕಾರಣದ ಬಗ್ಗೆ ಜ್ಞಾನೋದಯ-ಸಿದ್ದರಾಮಯ್ಯ ವ್ಯಂಗ್ಯ

ಶುಕ್ರವಾರ, 15 ಜನವರಿ 2021 (12:41 IST)
ಬೆಂಗಳೂರು : ಸಿಡಿ ತೋರಿಸಿ ಬಿಎಸ್ ವೈ ಗೆ ಬೆದರಿಸಿ ಮಂತ್ರಿ ಸ್ಥಾನ ಪಡೆದಿದ್ದಾರೆ. ಬೆದರಿಸಿ ಮಂತ್ರಿ ಆಗಿದ್ದಾರೆಂದು ಬಿಜೆಪಿ ಶಾಸಕರಿಂದಲೇ ಆರೋಪ ವಿಚಾರಕ್ಕೆ ಸಂಬಂಧಿಸಿದಂತೆ ಕಾಂಗ್ರೆಸ್ ನಾಯಕ ಸಿದ್ದರಾಮಯ್ಯ ಬಿಜೆಪಿ ನಾಯಕರಿಗೆ ಕುಟುಕಿದ್ದಾರೆ.

ಬ್ಲ್ಯಾಕ್ ಮೇಲ್ ಮಾಡಿದವರ ವಿರುದ್ಧ ಮೊಕದ್ದಮೆ ದಾಖಲಿಸ್ತೀರಾ? ಕ್ರಿಮಿನಲ್ ಕೇಸ್ ದಾಖಲಿಸುವ ಧೈರ್ಯ ಸಿಎಂಗಿದೆಯೇ? ಟ್ವೀಟರ್ ನಲ್ಲಿ ಸಿಎಂ ಬಿಎಸ್ ಯಡಿಯೂರಪ್ಪ ಅವರನ್ನು ಸಿದ್ದರಾಮಯ್ಯ ಪ್ರಶ್ನಿಸಿದ್ದಾರೆ.

ಬಿಎಸ್ ವೈ ಅವರ ಕುಟುಂಬ ರಾಜಕಾರಣದ ಬಗ್ಗೆ ಜ್ಞಾನೋದಯ. ಬಿಜೆಪಿ ನಾಯಕರಿಗೆ ತಡವಾಗಿ ಜ್ಞಾನೋದಯವಾಗಿದೆ. ಬಿಎಸ್ ಯಡಿಯೂರಪ್ಪ ನಾಮಕಾವಸ್ತೆ ಮುಖ್ಯಮಂತ್ರಿ ಎಂದು ಸಿದ್ದರಾಮಯ್ಯ ಬಿಜೆಪಿ ನಾಯಕರಿಗೆ ಕುಟುಕಿದ್ದಾರೆ.

ವೆಬ್ದುನಿಯಾವನ್ನು ಓದಿ

ಸಂಬಂಧಿಸಿದ ಸುದ್ದಿ