ಸಿಎಂ ಮೇಲೆ ಕಾಗೆ ಹಿಕ್ಕೆ ಹಾಕಿದ ವಿಚಾರಕ್ಕೆ ಸಂಬಂಧಿಸಿದಂತೆ ಸಿದ್ದರಾಮಯ್ಯರಿಗೆ ಕಾಗೆ ಕಾಟ ಶುರುವಾಗಿದೆ ಎಂದ ಮೇಲೆ ನಾನೇನು ಮಾಡಕ್ಕಾಗುತ್ತೆ. ಆದರೆ, ಕಾಗೆ ಬಿಟ್ಟಿದ್ದು ಮಾತ್ರ ನಾನಲ್ಲ ಎಂದು ವಿಧಾನ ಪರಿಷತ್ ಪ್ರತಿಪಕ್ಷ ನಾಯಕ ಕೆ.ಎಸ್.ಈಶ್ವರಪ್ಪ ಹಾಸ್ಯ ಚಟಾಕಿ ಸಿಡಿಸಿದ್ದಾರೆ.
ವಿಜಯಪುರದಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ತಮ್ಮ ಹಾಗೂ ಬಿ.ಎಸ್.ಯಡಿಯೂರಪ್ಪ ನಡುವಿನ ಭಿನ್ನಾಭಿಪ್ರಾಯ ಸದ್ಯದಲ್ಲಿಯೇ ಬಗೆಹರಿಯಲಿದೆ. ಅವರವಿಂದ ಲಿಂಬಾವಳಿ ಮತ್ತು ಆಯನೂರು ಮಂಜುನಾಥ್ ಮಂಜುನಾಥ್ ನೀಡಿರುವ ಹೇಳಿಕೆ ಕುರಿತು ಪ್ರತಿಕ್ರಿಯೆ ನೀಡಲ್ಲ ಎಂದರು.