ಈಶ್ವರಪ್ಪಗೆ ಕಜಕಿಸ್ತಾನದಿಂದ ಬೆದರಿಕೆ ಕರೆ

ಸೋಮವಾರ, 15 ಮೇ 2023 (20:40 IST)
ನಿನ್ನೆ ರಾತ್ರಿ ನನಗೆ ಕಜಕಿಸ್ತಾನದಿಂದ ಬೆದರಿಕೆ ಕರೆ ಬಂದಿದೆ ಎಂದು ಮಾಜಿ ಸಚಿವ ಕೆ.ಎಸ್. ಈಶ್ವರಪ್ಪ ಹೇಳಿದ್ದಾರೆ. ಶಿವಮೊಗ್ಗದಲ್ಲಿ ಮಾತನಾಡಿದ ಅವರು, ನಿನ್ನೆ ರಾತ್ರಿ ನಾನು ಮೊಬೈಲ್​​​ ಸೈಲೆಂಟ್ ಮಾಡಿ ಮಲಗಿದ್ದೆ. ನನಗೆ ಮಿಸ್ಡ್ ಕಾಲ್ ಬಂದಿದೆ. ಕಜಕಿಸ್ತಾನದಿಂದ ವಾಟ್ಸಪ್ ಕಾಲ್ ಬಂದಿದೆ ಎಂದು ತಿಳಿಸಿದ್ರು. ಇದು ಹೇಡಿಗಳು ಮಾಡುವ ಕೆಲಸ. ಈ ಸಂಬಂಧ ನಾನು ಜಿಲ್ಲಾ ರಕ್ಷಣಾಧಿಕಾರಿಗಳಿಗೆ ದೂರು ನೀಡುತ್ತಿದ್ದೇನೆ. ಜೈಲಿನಲ್ಲಿರುವಂತಹ ವ್ಯಕ್ತಿಯ ಡೈರಿಯಲ್ಲಿ ನನ್ನ ಹೆಸರು ಉಲ್ಲೇಖವಾಗಿತ್ತು. NIA ಅಧಿಕಾರಿಗಳು ತನಿಖೆ ನಡೆಸುವ ವೇಳೆ ಈ ಬಗ್ಗೆ ಬಹಿರಂಗವಾಗಿತ್ತು. ನಿನ್ನೆ ರಾತ್ರಿ ನನಗೆ ಬೆದರಿಕೆ ಕರೆ ಮತ್ತೆ ಬಂದಿದೆ ಎಂದು ತಿಳಿಸಿದ್ರು. ಹಿಂದೆ ಕೇಂದ್ರ ಸಚಿವ ನಿತಿನ್ ಗಡ್ಕರಿ ಅವರಿಗೆ ಬೆದರಿಕೆ ಕರೆ ಬಂದಿತ್ತು. ಈ ಬಗ್ಗೆ NIA ತನಿಖೆ ಮಾಡಿತ್ತು. ಸಾಹಿಲ್ ಶೇಖ್ ಎಂಬಾತನ ಬಂಧನವಾಗಿತ್ತು. ಆಗ ನನಗೂ ಬೆದರಿಕೆ ಇರುವುದು ಗೊತ್ತಾಗಿದೆ ಎಂದು ತಿಳಿಸಿದ್ರು. ರಾಷ್ಟ್ರ ವಿರೋಧಿ ಚಟುವಟಿಕೆ ನಡೆಯುತ್ತಿದೆ. ಬೆಳಗಾವಿಯಲ್ಲಿ ಪಾಕ್ ಪರ ಘೋಷಣೆ ಕೂಗಿದ್ದಾರೆ. ಈ ಬಗ್ಗೆ ಬೆಳಗಾವಿಯ ಟಿಳಕವಾಡಿ ಠಾಣೆಯಲ್ಲಿ ಸುಮೊಟೊ ದೂರು ದಾಖಲಾಗಿದೆ. ಶಿರಸಿಯಲ್ಲೂ ಹಸಿರು ಧ್ವಜ ಹಾರಾಟವಾಗಿದೆ. ಪಾಕ್ ಪರ ಏಜೆಂಟರು ನಮ್ಮ ರಾಜ್ಯದಲ್ಲಿ ಚಿಗುರೊಡೆಯುತ್ತಿದ್ದಾರೆ ಎಂದು ಕಿಡಿಕಾರಿದ್ರು.

ವೆಬ್ದುನಿಯಾವನ್ನು ಓದಿ

ಸಂಬಂಧಿಸಿದ ಸುದ್ದಿ