ಈ ಎರಡು ಕ್ಷೇತ್ರದಲ್ಲಿ ಬಿಜೆಪಿ ಗೆಲ್ಲದಿದ್ದರೆ ರಾಜಕೀಯ ಸನ್ಯಾಸ ಸ್ವೀಕರಿಸುವೆ ಎಂದ ಈಶ್ವರಪ್ಪ

ಸೋಮವಾರ, 11 ಮಾರ್ಚ್ 2019 (10:18 IST)
ಹಾವೇರಿ : ಈ ಬಾರಿಯ ಚುನಾವಣೆಯಲ್ಲಿ ಬದಾಮಿ ಹಾಗೂ ಶಿವಮೊಗ್ಗ ಎರಡೂ ಕ್ಷೇತ್ರದಲ್ಲಿ ಬಿಜೆಪಿ ಗೆಲ್ಲದಿದ್ದರೆ ನಾನು ರಾಜಕೀಯ ಸನ್ಯಾಸ ಸ್ವೀಕರಿಸುವುದಾಗಿ ಬಿಜೆಪಿ ಶಾಸಕ ಈಶ್ವರಪ್ಪ ಸವಾಲು ಹಾಕಿದ್ದಾರೆ.


ಬ್ಯಾಡಗಿ ತಾಲೂಕಿನ ಮೋಟೆಬೆನ್ನೂರಿನಲ್ಲಿ ಮಾತನಾಡಿದ ಈಶ್ವರಪ್ಪ, ಸಿದ್ದರಾಮಯ್ಯ ನೀವು ಬದಾಮಿಯಲ್ಲಿ ರಾಜೀನಾಮೆ ಕೊಟ್ಟು ಶಿವಮೊಗ್ಗದಲ್ಲಿ ಚುನಾವಣೆಗೆ ನಿಲ್ಲಿ. ನಾನು ಶಿವಮೊಗ್ಗದಲ್ಲಿ ರಾಜೀನಾಮೆ ನೀಡಿ ಬಿಜೆಪಿ ಅಭ್ಯರ್ಥಿಯಾಗಿ ಬದಾಮಿಯಲ್ಲಿ ಕಣಕ್ಕಿಳಿಯುತ್ತೇನೆ. ಒಂದು ವೇಳೆ ಬದಾಮಿ ಕ್ಷೇತ್ರದಲ್ಲಿ ಮಾಜಿ ಸಿಎಂ ಸಿದ್ದರಾಮಯ್ಯ ಮತ್ತೊಮ್ಮೆ ಗೆದ್ದು ಬಂದರೆ ನಾನು ರಾಜಕೀಯ ಸನ್ಯಾಸ ಸ್ವೀಕರಿಸುತ್ತೇನೆ  ಎಂದು ಸವಾಲೆಸೆದಿದ್ದಾರೆ.


ಸಿದ್ದರಾಮಯ್ಯ ಅವರು ಪುಂಗಿದಾಸಯ್ಯ ಎನ್ನುವುದು ರಾಜ್ಯದ ಜನರಿಗೆ ಗೊತ್ತು. ನನ್ನನ್ನು ಎರಡನೇ ದರ್ಜೆಯ ಸಚಿವನ ರೀತಿಯಲ್ಲಿ ನೋಡುತ್ತಾರೆ ಎಂದು ಸ್ವತಃ ಕುಮಾರಸ್ವಾಮಿಯರೇ ಹೇಳುತ್ತಾರೆ. ಇಷ್ಟರ ಮೇಲೆ ಕಾಂಗ್ರೆಸ್ ಸರ್ಕಾರ ಯಾವ ರೀತಿ ವರ್ತಿಸುತ್ತಿದೆ ಎಂಬುದನ್ನು ಗೊತ್ತಾಗುತ್ತದೆ ಎಂದು ವ್ಯಂಗ್ಯವಾಡಿದ್ದಾರೆ.


ತಾಜಾ ಸುದ್ದಿಗಳನ್ನು ಓದಲು ವೆಬ್‌ದುನಿಯಾ ಮೊಬೈಲ್ ಆ್ಯಪ್ ಡೌನ್‍ ಲೋಡ್ ಮಾಡಿಕೊಳ್ಳಿ.

ವೆಬ್ದುನಿಯಾವನ್ನು ಓದಿ

ಸಂಬಂಧಿಸಿದ ಸುದ್ದಿ