ಜಲಮಂಡಳಿ ಮತ್ತು ಲೋಕೋಪಯೋಗಿ ಇಲಾಖೆಗಳ ಅನುದಾನದಲ್ಲಿ ನಡೆಯುತ್ತಿರುವ ಕಾಮಗಾರಿಗಳಿಗೆ ಚಾಲನೆ ನೀಡಿದ ಬಳಿಕ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಬಿಬಿಎಂಪಿ ಅಧಿಕಾರಿಗಳ ನಿರ್ಲಕ್ಷದಿಂದಲೇ ಈ ಬಡಾವಣೆಗಳಲ್ಲಿ ನೀರು ತುಂಬಲು ಕಾರಣವೆಂದು, ಅಧಿಕಾರಿಗಳನ್ನು ತರಾಟೆಗೆ ತೆಗೆದುಕೊಂಡರು. ಮುಂದೆ ಆಗುವ ಅನಾಹುತಗಳನ್ನು ತಪ್ಪಿಸಲು ಬಿಬಿಎಂಪಿ ಅಗತ್ಯ ಕ್ರಮಗಳನ್ನು ಕೈಗೊಳ್ಳಬೇಕು ಎಂದು ಆಗ್ರಹಿಸಿದ್ದಾರೆ.
ಮುಖ್ಯಮಂತ್ರಿ ಸಿದ್ದರಾಮಯ್ಯನವರು ನಗರದ ಕಾಳಜಿಯಿಂದ ಅಧಿಕಾರಿಗಳ ಜೊತೆ ಸಭೆ ನಡೆಸಿ ಮಳೆಯಿಂದ ಆಗುವ ಅನಾಹುತ ಕುರಿತು ಮುನ್ನೆಚ್ಚರಿಕಾ ಸಲಹೆಗಳನ್ನು ನೀಡಿದ್ದಾರೆ. ಆದರೆ, ಬಿಬಿಎಂಪಿ ಅಧಿಕಾರಿಗಳು ನಿರ್ಲಕ್ಷವಹಿಸುತ್ತಿದ್ದಾರೆ ಎಂದು ಮಾಜಿ ಡಿಸಿಎಂ ಆರ್.ಅಶೋಕ್ ದೂರಿದ್ದಾರೆ.