ಗುರುವಾರ ಸಂಜೆ ಈ ಆದೇಶ ಹೊರಡಿಸಲಾಗಿದ್ದು, ಕೆಂಪಯ್ಯ ಅವರಿಗೆ ರಾಜ್ಯ ಸಚಿವ ದರ್ಜೆ ಸ್ಥಾನಮಾನ ನೀಡಲಾಗಿದೆ. ಲೋಕಸಭಾ ಚುನಾವಣೆಗೆ ಮುನ್ನವೇ ಕೆಂಪಯ್ಯ ಅವರನ್ನು ಈ ಹುದ್ದೆಗೆ ನೇಮಕ ಮಾಡುವ ಪ್ರಸ್ತಾಪ ಇತ್ತು. ಆದರೆ ನೀತಿ ಸಂಹಿತೆ ಜಾರಿ ಹಿನ್ನೆಲೆಯಲ್ಲಿ ಸಾಧ್ಯವಾಗಲಿಲ್ಲ. ಬಳಿಕ ಶಾಸಕರ ವಿರೋಧ ಹಿನ್ನೆಲೆಯಲ್ಲಿ ಈ ಪ್ರಸ್ತಾಪ ಕೈಬಿಟ್ಟು ಸಿಎಂ ಸಿದ್ದರಾಮಯ್ಯ ಅವರ ಆಂತರಿಕ ಭದ್ರತೆ ಸಲಹೆಗಾರರನ್ನಾಗಿ ನೇಮಿಸಿಕೊಳ್ಳಲು ಚಿಂತನೆ ನಡೆದಿತ್ತು.