ಅಧ್ಯಾಪಕರಾಗಿ ಗ್ರಂಥ ಶಾಸ್ತ್ರ ಭೋಧಿಸುತ್ತಿದ್ದ ಕಲಬುರ್ಗಿ ಕೇಂದ್ರ ಸಾಹಿತ್ಯ ಅಕಾಡೆಮಿ, ಚಿದಂನಾದ್ ಪ್ರಶಸ್ತಿ, ನಾಡೋಜ್ ಪ್ರಶಸ್ತಿ ಸೇರಿದಂತೆ ಹಲವು ಪ್ರಶಸ್ತಿಗಳಿಗೆ ಭಾಜನರಾಗಿದ್ದರು.
ಇಂದು ಬೆಳಿಗ್ಗೆ ಸುಮಾರು 8.30ರ ವೇಳೆಗೆ ಕಲ್ಯಾಣ ನಗರದಲ್ಲಿರುವ ಅವರ ನಿವಾಸಕ್ಕೆ ನುಗ್ಗಿದ ಶಸ್ತ್ರಾಸ್ತರಸಹಿತ ಯುವಕನೊಬ್ಬ ಅವರ ಮೇಲೆ ಗುಂಡಿನ ದಾಳಿ ನಡೆಸಿದ್ದ. ಈ ಸಂದರ್ಭದಲ್ಲಿ ಎರಡು ಬುಲೆಟ್'ಗಳು ತಲೆಗೆ ಹೊಕ್ಕಿದ್ದು ತಕ್ಷಣವೇ ಆಸ್ಪತ್ರೆಗೆ ಸಾಗಿಸಲಾಗಿತ್ತು. ಆದರೆ ಆಸ್ಪತ್ರೆಗೆ ಸಾಗಿಸುವಾಗ ದಾರಿ ಮಧ್ಯೆ ಸಾವನ್ನಪ್ಪಿದ್ದಾರೆ.
ದಾಳಿ ನಡೆಸಿದ ಯುವಕ ಯಾರು ಹಾಗೂ ಅವನು ಯಾವ ಕಾರಣಕ್ಕಾಗಿ ದಾಳಿ ನಡೆಸಿದ ಎಂಬ ಕುರಿತು ಇನ್ನೂ ಮಾಹಿತಿ ಲಭ್ಯವಾಗಿಲ್ಲ. ಇದೀಗ ಡಾ. ಕಲಬುರಗಿಯವರ ಮೃತದೇಹವನ್ನು ಮರಣೋತ್ತರ ಪರೀಕ್ಷೆಗಾಗಿ ಜಿಲ್ಲಾಸ್ಪತ್ರೆಗೆ ಕೊಂಡೊಯ್ಯಲಾಗಿದೆ.
ಈ ಮೊದಲೂ ಕಲಬುರಗಿಯವರ ನಿವಾಸದ ಮೇಲೆ ದುಷ್ಕರ್ಮಿಗಳು ಕಲ್ಲು ತೂರಾಟ ನಡೆಸಿದ ಅಹಿತಕರ ಘಟನೆ ಸಂಭವಿಸಿತ್ತು ಹೀಗಾಗಿ ಅವರ ನಿವಾಸಕ್ಕೆ ಪೋಲೀಸ್ ಭದ್ರತೆ ಒದಗಿಸಲಾಗಿತ್ತು ಎಂದು ತಿಳಿದು ಬಂದಿದೆ.