ಅಬಕಾರಿ ಸಚಿವ ಸತೀಶ್ ಜಾರಕಿಹೊಳಿ ರಾಜೀನಾಮೆ

ಮಂಗಳವಾರ, 27 ಜನವರಿ 2015 (20:36 IST)
ಅಬಕಾರಿ ಖಾತೆಯಿಂದ ಜನರ ಬಳಿ ಹೋಗಲು ಸಾಧ್ಯವಾಗುತ್ತಿಲ್ಲ. ಸಮಾಜಸೇವೆಗಾಗಿ ಸಚಿವ ಸ್ಥಾನಕ್ಕೆ ರಾಜೀನಾಮೆ ನೀಡುತ್ತಿರುವುದಾಗಿ ಅಬಕಾರಿ ಸಚಿವ ಸತೀಶ್ ಜಾರಕಿಹೊಳಿ ಹೇಳಿದ್ದಾರೆ.
 
ಆದರೆ, ಸಿಎಂ ಸಿದ್ದರಾಮಯ್ಯ ಅವರಿಗೆ ಜಾರಕಿಹೊಳಿ ಅವರು ರಾಜೀನಾಮೆ ಪತ್ರವನ್ನು ಕಳುಹಿಸಿದ್ದಾರೆ. ಆದರೆ, ರಾಜೀನಾಮೆ ಇನ್ನೂ ಅಂಗೀಕಾರಗೊಂಡಿಲ್ಲ.
 
ತಮಗೆ ಅಬಕಾರಿ ಖಾತೆ ಬೇಡ ಅಬಕಾರಿ ಖಾತೆಯಿಂದ ಮುಕ್ತಿ ನೀಡಿ, ಜನರ ಬಳಿ ಹೋಗುವಂತಹ ಖಾತೆ ನೀಡಿ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯರಿಗೆ ಎರಡು ಬಾರಿ ಸತೀಶ್ ಜಾರಕಿಹೊಳಿ ಮನವಿ ಮಾಡಿಕೊಂಡಿದ್ದರು. ಆದರೆ, ಖಾತೆ ಬದಲಾವಣೆ ಮಾಡಿರಲಿಲ್ಲ. ತಿರುಪತಿ ಮತ್ತು ವಿಜಯಪುರ ಪ್ರವಾಸದಲ್ಲಿರುವ ಸಿಎಂ ರಾಜೀನಾಮೆಯನ್ನು ಇನ್ನೂ ಅಂಗೀಕರಿಸಿಲ್ಲ ಎಂದು ಮೂಲಗಳು ತಿಳಿಸಿವೆ. 
 
ಸಚಿವ ಸ್ಥಾನಕ್ಕೆ ರಾಜೀನಾಮೆ ನೀಡಿರುವುದು ನಿಜ. ಆದರೆ, ಮುಖ್ಯಮಂತ್ರಿ ಸಿದ್ದರಾಮಯ್ಯ ಅವರೊಂದಿಗೆ ಯಾವುದೇ ಮನಸ್ಥಾಪವಿಲ್ಲ. ಸದಾ ಸಿಎಂ ಅವರನ್ನು ಬೆಂಬಲಿಸುವುದಾಗಿ ಸಚಿವ ಜಾರಕಿಹೋಳಿ ತಿಳಿಸಿದ್ದಾರೆ. 
 

ವೆಬ್ದುನಿಯಾವನ್ನು ಓದಿ