ಸಿದ್ದರಾಮಯ್ಯರವರ ಅನ್ನಭಾಗ್ಯ ಯೋಜನೆ ವಿಸ್ತರಣೆಗೆ ಸಿಎಂ ಹಿಂದೇಟು

ಗುರುವಾರ, 6 ಜೂನ್ 2019 (10:50 IST)
ಬೆಂಗಳೂರು : ಮಾಜಿ ಸಿಎಂ ಸಿದ್ದರಾಮಯ್ಯ ಅವರ ಮಹತ್ವಾಕಾಂಕ್ಷಿ ಯೋಜನೆಯಾದ ಅನ್ನಭಾಗ್ಯ ಯೋಜನೆ ವಿಸ್ತರಣೆಗೆ ಸಿಎಂ ಹೆಚ್.ಡಿ.ಕುಮಾರಸ್ವಾಮಿ ಹಿಂದೇಟು ಹಾಕಿದ್ದಾರೆ.




ಸಿದ್ದರಾಮಯ್ಯ ಅವರ ನೇತೃತ್ವದ ಸರ್ಕಾರ ಜಾರಿಗೆ ತಂದ  ಅನ್ನಭಾಗ್ಯ ಯೋಜನೆಯಡಿ ಸದ್ಯ 7 ಕೆ.ಜಿ.ಅಕ್ಕಿ ವಿತರಣೆ ಮಾಡಲಾಗುತ್ತಿತ್ತು. ಆದರೆ ಇದೀಗ ಅದನ್ನ 10 ಕೆಜಿಗೆ ವಿಸ್ತರಿಸಲು ಸಮನ್ವಯ ಸಮಿತಿಯಲ್ಲಿ ದೋಸ್ತಿ ಸರ್ಕಾರದ ನಾಯಕರು ಚರ್ಚೆನಡೆಸಿದ್ದಾರೆ.


ಆದರೆ ಅನ್ನಭಾಗ್ಯ ಯೋಜನೆ ವಿಸ್ತರಣೆಗೆ ಸಿಎಂ ಹೆಚ್.ಡಿ.ಕುಮಾರಸ್ವಾಮಿ ಹಿಂದೇಟು ಹಾಕಿದ್ದು, 10 ಕೆಜಿ ವಿತರಣೆ ಮಾಡಿದರೆ ಸರ್ಕಾರದ ಬೊಕ್ಕಸಕ್ಕೆ ಹೊರೆಯಾಗುತ್ತದೆ. ಆರ್ಥಿಕ ಹೊರೆ ಹಿನ್ನಲೆಯಲ್ಲಿ ವಿಸ್ತರಣೆ ಮಾಡದಿರಲು ಸಿಎಂ ನಿರ್ಧಾರ ಮಾಡಿದ್ದಾರೆ ಎನ್ನಲಾಗಿದೆ.

ವೆಬ್ದುನಿಯಾವನ್ನು ಓದಿ

ಸಂಬಂಧಿಸಿದ ಸುದ್ದಿ