ಮಾಧ್ಯಮಗಳೊಂದಿಗೆ ಮಾತನಾಡಿದ ನಗರ ಪೊಲೀಸ್ ಆಯುಕ್ತ ಎಂ.ಎನ್.ರೆಡ್ಡು, ಈ ಹಿಂದೆ ಆರೋಪಿಯನ್ನು ಬಂಧಿಸಿದ ಬಳಿಕ ನ್ಯಾಯಾಲಯಕ್ಕೆ ಹಾಜರುಪಡಿಸಲಾಗಿತ್ತು. ಅಂದು ಹೆಟಚ್ಚಿನ ಮಾಹಿತ್ ಕಲಾ ಹಾಕುವ ಸಲುವಾಗಿ ಸುಮಾರು 5 ದಿನಗಳ ಅವಧಿಗೆ ನ್ಯಾಯಾಲಯ ಪೊಲೀಸರ ವಶಕ್ಕೆ ನೀಡಿತ್ತು. ಆದರೆ ಆ ಅವಧಿ ನಿನ್ನೆಗೆ ಮುಗಿದಿದ್ದು, ಇನ್ನು ಹೆಚ್ಚಿನ ವಿಚಾರಣೆಗೆ ಒಳಪಡಿಸಬೇಕಿದೆ. ಹಾಗಾಗಿ ಆರೋಪಿಯನ್ನು ಮತ್ತಷ್ಟು ದಿನಗಳ ಕಾಲ ಪೊಲೀಸ್ ಕಸ್ಟಡಿಗೆ ಒಪ್ಪಿಸುವಂತೆ ಇಂದು ನಡೆಯುವ ವಿಚಾರಣೆಯಲ್ಲಿ ನ್ಯಾಯಾಧೀಶರ ಎದುರು ಮನವಿ ಮಾಡಲಿದ್ದೇವೆ. ಇನ್ನು ಮೆಹದಿಯ ತಂದೆ-ತಾಯಿಗೆ ಆತನನ್ನು ಭೇಟಿಯಾಗಲು ನಿನ್ನೆ ಅವಕಾಶ ನೀಡಲಾಗಿತ್ತು ಎಂದು ತಿಳಿಸಿದ್ದಾರೆ.