ಗೌರಿ ಲಂಕೇಶ್ ಹತ್ಯೆ ಸಂಬಂಧ FIRನಲ್ಲಿದೆ ಸ್ಫೋಟಕ ಮಾಹಿತಿ
ಬೆಂಗಳೂರು: ಪತ್ರಕರ್ತೆ ಗೌರಿ ಲಂಕೇಶ್ ಹತ್ಯೆ ಪ್ರಕರಣಕ್ಕೆ ಸಂಬಂಧಿಸಿದಂತೆ ಆಕೆಯ ಸಹೋದರಿ ಕವಿತಾ ಲಂಕೇಶ್ ನೀಡಿರುವ ದೂರಿನ ಪ್ರತಿ ವೆಬ್ ದುನಿಯಾ ಕನ್ನಡಕ್ಕೆ ಲಭ್ಯವಾಗಿದೆ.
ದುಷ್ಕರ್ಮಿಗಳು ದುರುದ್ದೇಶದಿಂದ ನನ್ನ ಅಕ್ಕನನ್ನು ಹತ್ಯೆ ಮಾಡಿದ್ದಾರೆ ಎಂದು ಕವಿತಾ ಲಂಕೇಶ್ ದೂರು ನೀಡಿದ್ದಾರೆ. ಈ ಅನ್ವಯ ಐಪಿಸಿ ಸೆಕ್ಷನ್ 302 ಮತ್ತು ಶಸ್ತ್ರಾಸ್ತ್ರ ಕಾಯ್ದೆ 25 ಅಡಿಯಲ್ಲಿ ರಾಜರಾಜೇಶ್ವರಿ ನಗರ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.