ಡಿಕೆಶಿ ಸಿಎಂ ಆಗಲೆಂದು ಅಭಿಮಾನಿಗಳ ಪೂಜೆ

ಸೋಮವಾರ, 15 ಮೇ 2023 (17:11 IST)
ವಿಧಾನಸಭಾ ಚುನಾವಣೆಯಲ್ಲಿ ಕಾಂಗ್ರೆಸ್​ ಅಧಿಕಾರದ ಚುಕಾಣಿ ಹಿಡಿದಿದ್ದು, ಮುಖ್ಯಮಂತ್ರಿ ಹುದ್ದೆಗಾಗಿ ಮಾಜಿ ಸಿಎಂ ಸಿದ್ದರಾಮಯ್ಯ ಹಾಗೂ ಕೆಪಿಸಿಸಿ ಅಧ್ಯಕ್ಷ ಡಿ.ಕೆ.ಶಿವಕುಮಾರ್ ನಡುವೆ ಪೈಪೋಟಿ ನಡೆಯುತ್ತಿದೆ.. ಇಬ್ಬರ ಬೆಂಬಲಿಗರು ತಮ್ಮ ನಾಯಕರ ಪರ ಬಿಗಿಪಟ್ಟು ಹಿಡಿದಿದ್ದಾರೆ. ಡಿ.ಕೆ ಶಿವಕುಮಾರ್​ ಸಿಎಂ ಆಗಲಿ ಎಂದು ಅಭಿಮಾನಿಗಳು ಬೆಂಗಳೂರಿನ ನೆಲಮಂಗಲದ ವಾದಕುಂಟೆ ಗ್ರಾಮದಲ್ಲಿ ವಿಶೇಷ ಪೂಜೆ ಸಲ್ಲಿಸಿದ್ದಾರೆ. ವಾದಕುಂಟೆ ಗ್ರಾಮದ ಶ್ರೀರಾಮ ಮಂದಿರದಲ್ಲಿ ಅಭಿಮಾನಿಗಳು ಸಾವಿರದ ಒಂದು ತೆಂಗಿನಕಾಯಿ ಈಡುಗಾಯಿ ಒಡೆದು ವಿಶೇಷ ಪೂಜೆ ಸಲ್ಲಿಸಿದ್ದಾರೆ. ಅಭಿಮಾನಿಗಳು ಮುಂದಿನ ಮುಖ್ಯಮಂತ್ರಿ ಡಿ.ಕೆ ಶಿವಕುಮಾರ್​ ಎಂದು ಘೋಷಣೆ ಕೂಗಿ ಪಟಾಕಿ‌ ಸಿಡಿಸಿ ಸಿಹಿ ಹಂಚಿ ಸಂಭ್ರಮಿಸಿದರು.

ವೆಬ್ದುನಿಯಾವನ್ನು ಓದಿ

ಸಂಬಂಧಿಸಿದ ಸುದ್ದಿ