ಪ್ರತಿಭಟನೆ ವೇಳೆ ವಿಷ ಸೇವಿಸಿ ಆತ್ಮಹತ್ಯೆಗೆ ಯತ್ನಿಸಿದ ರೈತ

ಸೋಮವಾರ, 29 ಜೂನ್ 2015 (14:01 IST)
ಇಲ್ಲಿನ ಸುವರ್ಣಸೌಧದಲ್ಲಿ ಮುಂಗಾರು ಅಧಿವೇಶನ ನಡೆಯುತ್ತಿರುವ ಹಿನ್ನೆಲೆಯಲ್ಲಿ ರೈತ ಸಂಘಗಳು ಸರ್ಕಾರದ ವಿರುದ್ಧ ಪ್ರತಿಭಟನೆ ಹಮ್ಮಿಕೊಂಡಿದ್ದು, ಈ ವೇಳೆ ರೈತನೋರ್ವ ಆತ್ಮಹತ್ಯೆಗೆ ಯತ್ನಿಸಿರುವ ಘಟನೆ ಜರುಗಿದೆ.  
 
ಆತ್ಮಹತ್ಯೆಗೆ ಯತ್ನಿಸಿದ ರೈತನನ್ನು ಸಿದ್ದರಾಯ(27) ಎನ್ನಲಾಗಿದ್ದು, ಬೆಳಗಾವಿ ಜಿಲ್ಲೆಯ ರಾಯಭಾಗ ತಾಲೂಕಿನ ನಿಲದಿ ಗ್ರಾಮದ ನಿವಾಸಿ ಎಂದು ಹೇಳಲಾಗಿದೆ. 
 
ಇನ್ನು ಈತ ಸಕ್ಕರೆ ಕಾರ್ಖಾನೆಯೊಂದಕ್ಕೆ ಕಬ್ಬು ರವಾನೆ ಮಾಡಿದ್ದ. ಆದರೆ ಕಾರ್ಖಾನೆ ನೀಡಬೇಕಿದ್ದ ಬಾಕಿ ಹಣ ನೀಡಿರಲಿಲ್ಲ. ಆದ್ದರಿಂದ ಈತನೂ ಕೂಡ ರೈತರ ಜೊತೆ ಪ್ರತಿಭಟನೆಯಲ್ಲಿ ಭಾಗಿಯಾಗಿದ್ದ. ಈ ವೇಳೆ ತೀವ್ರವಾದ ಮಾನಸಿಕ ನೋವನ್ನು ಅನುಭವಿಸಿದ ಸಿದ್ದರಾಯ ತನ್ನ ಬಳಿ ಇದ್ದ ವಿಷವನ್ನು ಸೇವಿಸಿ ಆತ್ಮಹತ್ಯೆ ಆತ್ಮಹತ್ಯೆಗೆ ಯತ್ನಿಸಿದ್ದಾನೆ. ಇದನ್ನು ಕಂಡ ಸ್ಥಳೀಯರು ಆತನನ್ನು ಜಿಲ್ಲಾಸ್ಪತ್ರೆಗೆ ಸೇರಿಸಿದ್ದು, ಚಿಕಿತ್ಸೆ ಕೊಡಿಸುತ್ತಿದ್ದಾರೆ.  
 
ಇನ್ನು ಈತ ತಾಲೂಕಿನ ಕೆಂಪೇವಾಡದ ಬಳಿ ಇರುವ ಸಕ್ಕರೆ ಕಾರ್ಖಾನೆಗೆ ತನ್ನ ಕಬ್ಬನ್ನು ಸಾಗಿಸಿದ್ದ ಎನ್ನಲಾಗಿದ್ದು, ಕಾರ್ಖಾನೆಯು ಜೆಡಿಎಸ್ ನಾಯಕ ಶ್ರೀಮಂತ್ ಪಾಟೀಲ್ ಅವರಿಗೆ ಸೇರಿದ್ದಾಗಿದೆ.  

ವೆಬ್ದುನಿಯಾವನ್ನು ಓದಿ