ಸಿಂಡಿಕೇಟ್ ಬ್ಯಾಂಕ್ನಲ್ಲಿ 1 ಲಕ್ಷ ಹಾಗೂ 3 ಲಕ್ಷ ಕೈ ಸಾಲ ಮಾಡಿಕೊಂಡಿದ್ದ ಎನ್ನಲಾಗಿದ್ದು, ಇದರಿಂದ ಮನನೊಂದಿದ್ದ ಈತ ಇಂದು ಬೆಳಗ್ಗೆ ತನ್ನ ಜಮೀನಿಗೆ ತೆರಳಿ ವಿಷ ಸೇವಿಸುವ ಮೂಲಕ ಆತ್ಮಹತ್ಯೆಗೆ ಯತ್ನಿಸಿದ್ದ. ಅದನ್ನು ಕಂಡ ಸ್ಥಳೀಯರು ಆತನನ್ನು ನಗರದ ಬಸವನ ಬಾಗೇವಾಡಿ ಸರ್ಕಾರಿ ಆಸ್ಪತ್ರೆ ದಾಖಲಿಸಿದ್ದರು. ಆದರೆ ಚಿಕಿತ್ಸೆ ಫಲಕಾರಿಯಾಗದೆ ಇಂದು ಕೊನೆಯುಸಿರೆಳೆದಿದ್ದಾನೆ.