ವಿಷ ಸೇವಿಸಿ ಆತ್ಮಹತ್ಯೆಗೆ ಯತ್ನಿಸಿದ್ದ ರೈತ ಸಾವು

ಮಂಗಳವಾರ, 7 ಜುಲೈ 2015 (16:42 IST)
ರಾಜ್ಯದಲ್ಲಿ ರೈತರ ಆತ್ಮಹತ್ಯೆ ಸರಣಿ ಮುಂದುವರಿದಿದ್ದು, ಸಾಲಬಾಧೆ ತಾಳಲಾರದೆ ವಿಷ ಸೇವಿದ್ದ ಆತ್ಮಹತ್ಯೆಗೆ ಯತ್ನಿಸಿದ್ದ ರೈತನೋರ್ವ ಚಿಕಿತ್ಸೆ ಫಲಕಾರಿಯಾಗದೆ ಇಂದು ಕೊನೆಯುಸಿರೆಳೆದಿದ್ದಾನೆ. 
 
ಮೃತ ರೈತನನ್ನು ಶರಣಗೌಡ ಭೀಮನಗೌಡ ಬಸರಕೋಡ್(32) ಎಂದು ಹೇಳಲಾಗಿದ್ದು, ಜಿಲ್ಲೆಯ ಮುದ್ದೇಬಿಹಾಳ ತಾಲೂಕಿನ ಪೆಡಕನೂರು ಗ್ರಾಮದ ನಿವಾಸಿಯಾಗಿದ್ದಾನೆ.  
 
ಸಿಂಡಿಕೇಟ್ ಬ್ಯಾಂಕ್‌ನಲ್ಲಿ 1 ಲಕ್ಷ ಹಾಗೂ 3 ಲಕ್ಷ ಕೈ ಸಾಲ ಮಾಡಿಕೊಂಡಿದ್ದ ಎನ್ನಲಾಗಿದ್ದು, ಇದರಿಂದ ಮನನೊಂದಿದ್ದ ಈತ ಇಂದು ಬೆಳಗ್ಗೆ ತನ್ನ ಜಮೀನಿಗೆ ತೆರಳಿ ವಿಷ ಸೇವಿಸುವ ಮೂಲಕ ಆತ್ಮಹತ್ಯೆಗೆ ಯತ್ನಿಸಿದ್ದ. ಅದನ್ನು ಕಂಡ ಸ್ಥಳೀಯರು ಆತನನ್ನು ನಗರದ ಬಸವನ ಬಾಗೇವಾಡಿ ಸರ್ಕಾರಿ ಆಸ್ಪತ್ರೆ ದಾಖಲಿಸಿದ್ದರು. ಆದರೆ ಚಿಕಿತ್ಸೆ ಫಲಕಾರಿಯಾಗದೆ ಇಂದು ಕೊನೆಯುಸಿರೆಳೆದಿದ್ದಾನೆ.   
 
ಈ ಪ್ರಕರಣ ಸಂಬಂಧ ಮುದ್ದೇಬಿಹಾಳ ಗ್ರಾಮಾಂತರ ಠಾಣೆಯಲ್ಲಿ ಪ್ರಕಱಣ ದಾಖಲಾಗಿದ್ದು, ಪೊಲೀಸರು ತನಿಖೆ ಮುಂದುವರಿಸಿದ್ದಾರೆ.

ವೆಬ್ದುನಿಯಾವನ್ನು ಓದಿ