ಚಂಡೀಗಢದ ಅಪಘಾತದಲ್ಲಿ ಗಾಯಗೊಂಡಿರುವ ರೈತ ಮುಖಂಡ ಕುರುಬೂರು ಬೆಂಗಳೂರಿಗೆ ಏರ್ ಲಿಫ್ಟ್
ವಿಷಯ ತಿಳಿದ ಕೂಡಲೇ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಏರ್ ಆಂಬುಲೆನ್ಸ್ ಮೂಲಕ ಶಾಂತಕುಮಾರ್ ಅವರನ್ನು ಬೆಂಗಳೂರಿಗೆ ಕರೆತರುವಂತೆ ಅಧಿಕಾರಿಗಳಿಗೆ ಸೂಚನೆ ನೀಡಿದ್ದರು
ಈ ಮಧ್ಯೆ ದೆಹಲಿ ನಿವಾಸಿ ಆಯುಕ್ತರಾದ ಇಂಕೊಂಗ್ಲ ಜಮೀರ್ ಅವರು ಪಂಜಾಬ್ ಸರ್ಕಾರದ ಮುಖ್ಯ ಕಾರ್ಯದರ್ಶಿ ಹಾಗೂ ಪಟಿಯಾಲದ ಆಸ್ಪತ್ರೆ ವೈದ್ಯರ ಜೊತೆ ಸತತ ಸಂಪರ್ಕದಲ್ಲಿದ್ದರು.
ಮುಖ್ಯಮಂತ್ರಿ ಸಿದ್ದರಾಮಯ್ಯ ಅವರ ಸೂಚನೆ ಮೇರೆಗೆ ಅಧಿಕಾರಿಗಳು ನಿನ್ನೆ ಏರ್ ಆಂಬುಲೆನ್ಸ್ ಸಜ್ಜುಗೊಳಿಸಿದ್ದರು. ಇಬ್ಬರು ಸಹಾಯಕರು ಹಾಗೂ ವೈದ್ಯರ ತಂಡದೊಂದಿಗೆ ಇಂದು ಶಾಂತಕುಮಾರ್ ಅವರನ್ನು ಬೆಂಗಳೂರಿಗೆ ಕರೆತರಲಾಗಿದೆ.