ಎತ್ತಿನಹೊಳೆ ಯೋಜನೆ ಅಧಿಕಾರಿಗಳ ವಿರುದ್ಧ ರೈತರು ಗರಂ

ಗುರುವಾರ, 30 ಮೇ 2019 (18:06 IST)
ಸರ್ಕಾರದ ಮಹತ್ವಾಕಾಂಕ್ಷಿ ಯೋಜನೆಯಿಂದ  ಗ್ರಾಮಸ್ಥರಿಗೆ ತೊಂದರೆ ಎದುರಾಗಿದೆ.

ಹಾಸನ ಜಿಲ್ಲೆಯ ಸಕಲೇಶಪುರ ತಾಲ್ಲೂಕಿನ ಬೆಳಗೋಡು ಹೋಬಳಿ ಹೆಬ್ಬಾನಹಳ್ಳಿ‌ ಗ್ರಾಮದಲ್ಲಿ ನಡೆಯುತ್ತಿರುವ ಕಾಮಗಾರಿಯಿಂದ ರೈತರು ಕಂಗೆಟ್ಟಿದ್ದಾರೆ.

ಭೂಮಿ ಪರಿಹಾರ ನೀಡದ ಎತ್ತಿನಹೊಳೆ ಯೋಜನೆ ಅಧಿಕಾರಿಗಳ ವಿರುದ್ಧ ಗ್ರಾಮಸ್ಥರ ಆಕ್ರೋಶ ಕಟ್ಟೆ ಒಡೆಯುತ್ತಿದೆ.
ಕಾಮಗಾರಿ ನಡೆಯುತ್ತಿರುವ ಸ್ಥಳದಲ್ಲಿ  ಗ್ರಾಮಸ್ಥರಿಂದ ಪ್ರತಿಭಟನೆ ನಡೆಯುತ್ತಿದೆ.

ಎತ್ತಿನ ಹೊಳೆ ಯೋಜನೆಯಿಂದ ಬೆಳಗೋಡು ಹೋಬಳಿಯ ಹತ್ತಾರು ಹಳ್ಳಿಗೆ ತೊಂದರೆಯಾಗುತ್ತಿದೆ. ಕಾಮಗಾರಿಗೆ ಡೈನಾಮಿಕ್ ಸ್ಫೋಟ ದಿಂದ  ಮನೆಗಳಿಗೆ ಹಾನಿಯುಂಟಾಗುತ್ತಿದೆ. ಶಾಶ್ವತ ಭೂ ಪರಿಹಾರ ನೀಡುವಂತೆ‌ ಗ್ರಾಮಸ್ಥರ ಒತ್ತಾಯವಾಗಿದೆ.

ಪ್ರತಿಭಟನಾ ಸ್ಥಳದಲ್ಲಿ ಯೋಜನೆ ವಿರುದ್ಧ ಮಹಿಳೆಯರು ಆಕ್ರೋಶ  ವ್ಯಕ್ತಪಡಿಸಿದ್ದಾರೆ. ಪರಿಹಾರ ನೀಡುವರೆಗೆ ಕಾಮಗಾರಿ ಸ್ಥಗಿತಗೊಳಿಸುವಂತೆ ಪಟ್ಟು ಹಿಡಿದಿದ್ದಾರೆ. ಕಾಮಗಾರಿ ವಾಹನಗಳನ್ನು ತೆರವುಗೊಳಿಸಿದ   ಪ್ರತಿಭಟನಾಕಾರರು ಪರಿಹಾರ ನೀಡುವವರೆಗೆ  ನಿರಂತರ ಪ್ರತಿಭಟನೆ ನಡೆಸುವ ಎಚ್ಚರಿಕೆ ನೀಡಿದ್ದಾರೆ.


ವೆಬ್ದುನಿಯಾವನ್ನು ಓದಿ

ಸಂಬಂಧಿಸಿದ ಸುದ್ದಿ