ಹೃದಯ ವಿದ್ರಾವಕ: ವಿದ್ಯುತ್ ತಂತಿ ಸ್ಪರ್ಶಿಸಿ ಅಪ್ಪ-ಮಗ ಸಾವು

ಶನಿವಾರ, 30 ಏಪ್ರಿಲ್ 2016 (10:30 IST)
ವಿದ್ಯುತ್ ತಂತಿ ಸ್ಪರ್ಶಿಸಿ ತಂದೆ-ಮಗ ದುರ್ಮರಣವನ್ನಪ್ಪಿದ ಘಟನೆ ರಾಮನಗರ ಜಿಲ್ಲೆಯ ಮುಳ್ಳಳ್ಳಿ ಗ್ರಾಮದಲ್ಲಿ ಶುಕ್ರವಾರ ರಾತ್ರಿ ನಡೆದಿದೆ. 
 
ಮೃತರನ್ನು ತಿಬ್ಬಯ್ಯ (60) ಮತ್ತು ಅವರ ಪುತ್ರ ರಾಜು(38) ಎಂದು ಗುರುತಿಸಲಾಗಿದ್ದು ಅವರಿಬ್ಬರು ನಿನ್ನೆ ಮಧ್ಯಾಹ್ನದಿಂದ ಜಮೀನಿನಲ್ಲಿ ಹಿಪ್ಪುನೇರಳೆ ಸೊಪ್ಪಿಗೆ ನೀರು ಕಟ್ಟುತ್ತಿದ್ದರು. ರಾತ್ರಿ ಕತ್ತಲಲ್ಲಿ ಅರಿವಿಲ್ಲದೇ ತುಂಡಾಗಿ ಬಿದ್ದಿದ್ದ ವಿದ್ಯುತ್ ತಂತಿ ಸ್ಪರ್ಶಿಸಿ ಅವರಿಬ್ಬರು ಸಾವನ್ನಪ್ಪಿದ್ದಾರೆ ಎಂದು ತಿಳಿದು ಬಂದಿದೆ. 
 
ತಂದೆ- ಮಗನನ್ನು ಕಳೆದುಕೊಂಡಿರುವ ಕುಟುಂಬದ ಸದಸ್ಯರ ಆಕ್ರಂದನ ಮುಗಿಲು ಮುಟ್ಟಿದೆ. 
 
ಕೋಡಿಹಳ್ಳಿ ಠಾಣೆಯಲ್ಲಿ ಪ್ರಕರಣ ದಾಖಲಾಗಿದ್ದು ಪೊಲೀಸರು ತನಿಖೆ ನಡೆಸುತ್ತಿದ್ದಾರೆ. 

ತಾಜಾ ಸುದ್ದಿಗಳನ್ನು ಓದಲು ಮೊಬೈಲ್ ಆ್ಯಪ್ ಡೌನ್‌ಲೋಡ್ ಮಾಡಿಕೊಳ್ಳಿ.   

ವೆಬ್ದುನಿಯಾವನ್ನು ಓದಿ