ಪ್ರಕರಣದ ಹಿನ್ನೆಲೆ: ಮಗಳು 9ನೇ ತರಗತಿಯಲ್ಲಿ ಅಭ್ಯಸಿಸುತ್ತಿದ್ದು, ಇಂದು ಫಲಿತಾಂಶ ಪ್ರಕಟಗೊಳ್ಳಲಿತ್ತು. ಈ ಹಿನ್ನೆಲೆಯಲ್ಲಿ ತಮ್ಮ ಮಗಳು ರಾಜೇಶ್ವರಿ ಅವರನ್ನು ಕರೆದುಕೊಂಡು ಮಹಾದೇವ್ ಶಾಲೆಯತ್ತ ಮೃತ ಮಹಾದೇವ ದ್ವಿ ಚಕ್ರ ವಾಹನದಲ್ಲಿ ಸಾಗಿದ್ದರು. ಈ ವೇಳೆ ಎದುರಿಗೆ ಬರುತ್ತಿದ್ದ ಲಾರಿಯೊಂದು ಬೈಕ್ಗೆ ಡಿಕ್ಕಿ ಹೊಡೆದಿದೆ. ಪರಿಣಾಮ ವಾಹನ ಚಲಾಯಿಸುತ್ತಿದ್ದ ವಿದ್ಯಾರ್ಥಿನಿಯ ತಂದೆ ಸ್ಥಳದಲ್ಲಿಯೇ ಸಾವನ್ನಪ್ಪಿದ್ದಾರೆ. ಘಟನೆಯಲ್ಲಿ ಗಂಭೀರವಾಗಿ ಗಾಯಗೊಂಡ ವಿದ್ಯಾರ್ಥಿನಿ ರಾಜೇಶ್ವರಿಯನ್ನು ಸ್ಥಳೀಯರು ಆಸ್ಪತ್ರೆಗೆ ದಾಖಲಿಸಿದ್ದಾರೆ.