ಶಿವಕುಮಾರ 11 ವರ್ಷಗಳ ಹಿಂದೆ ತಾಯಮ್ಮ ಎಂಬುವವಳನ್ನು ಮದುವೆಯಾಗಿದ್ದ.ಆರೋಪಿ ಕೆಲಸಕ್ಕೆ ಹೋಗುತ್ತಿರಲಿಲ್ಲ. ಸದಾ ಮನೆಯಲ್ಲೇ ಕುಳಿತಿರುತ್ತಿದ್ದ. ಪತ್ನಿ ತಾಯಮ್ಮ ಶಿವಕುಮಾರನಿಗೆ ಮಕ್ಕಳ ಸ್ಕೂಲ್ ಫೀಸ್ ಕಟ್ಟುವಂತೆ ಹೇಳಿದ್ದಳು. ಆದರೆ ಇದೇ ತನ್ನ ಮಕ್ಕಳ ಪಾಲಿಗೆ ಸಾವಾಗಲಿದೆ ಎಂಬ ಕಲ್ಪನೆ ಅವಳಿಗಿರಲಿಲ್ಲ. ಕಳೆದ ಶನಿವಾರ ಸ್ಕೂಲ್ ಡೇ ಮುಗಿಸಿಕೊಂಡು ಬಂದು ಮಕ್ಕಳು ಮನೆಯಲ್ಲಿ ಆಟವಾಡ್ತಿದ್ದರು. ಈ ವೇಳೆ ಮನೆಗೆ ಬಂದ ಶಿವಕುಮಾರ ಇಬ್ಬರು ಮಕ್ಕಳ ಬಾಯಿಗೆ ಬಟ್ಟೆ ತುರುಕಿ, ಕೈ ಕಾಲು ಕಟ್ಟಿ, ಚಾಕುವಿನಿಂದ ಇರಿದು ಕೊಲೆ ಮಾಡಿ ಮನೆ ಹತ್ತಿರದ ಮೋರಿಯಲ್ಲಿ ಬಿಸಾಕಿ ಮಲೆ ಮಹದೇಶ್ವರಕ್ಕೆ ಬಸ್ ಹತ್ತಿದ್ದಾನೆ.