ಯೋಗೇಶ್ವರ್ ನಡೆಯಿಂದ ಬೇಸರವಾಗಿದೆ: ಕೋಟ ಶ್ರೀನಿವಾಸ ಪೂಜಾರಿ

Sampriya

ಬುಧವಾರ, 23 ಅಕ್ಟೋಬರ್ 2024 (16:49 IST)
Photo Courtesy X
ಉಡುಪಿ: ಬಿಜೆಪಿ ತೊರೆದು ಕಾಂಗ್ರೆಸ್‌ಗೆ ಸೇರ್ಪಡೆಯಾದ ಸಿ.ಪಿ.ಯೋಗೇಶ್ವರ್ ನಡೆಗೆ ಸಂಸದ ಕೋಟ ಶ್ರೀನಿವಾಸ ಪೂಜಾರಿ ಬೇಸರ ವ್ಯಕ್ತಪಡಿಸಿದ್ದಾರೆ.

ಉಡುಪಿಯಲ್ಲಿ  ಮಾತನಾಡಿದ ಅವರು, ಯೋಗೇಶ್ವರ್ ಅವರು ನಮ್ಮನ್ನು ಬಿಡುವುದಿಲ್ಲ ಎನ್ನುವ ವಿಶ್ವಾಸವಿತ್ತು. ಕ್ಷೇತ್ರದಲ್ಲಿ ಎನ್‌ಡಿಎ ಗೆಲ್ಲಬೇಕು ಅನ್ನೋದು ನಮ್ಮ ವಿಚಾರ. ಚನ್ನಪಟ್ಟಣದಲ್ಲಿ ನಮಗೆ ಗೆಲ್ಲುವ ಸಿಗುವ ವಿಶ್ವಾಸವಿದೆ ಎಂದು ಭರವಸೆ ವ್ಯಕ್ತಪಡಿಸಿದರು.

ರಾಜಕಾರಣದಲ್ಲಿ ಈ ರೀತಿಯ ತರ್ಕಗಳು, ಚರ್ಚೆಗಳು ಬೆಳವಣಿಗೆಗಳು ಆಗುವುದು ಸಹಜ. ಒಟ್ಟು ಚುನಾವಣೆ ಸುಖಾಂತ್ಯವಾಗುತ್ತದೆ ಎನ್ನುವ ವಿಶ್ವಾಸವಿದೆ. ಚನ್ನಪಟ್ಟಣ ಉಪಚುನಾವಣೆಯಲ್ಲಿ ಎನ್‌ಡಿಎ ಇಂದ ಯಾರನ್ನು ನಿಲ್ಲಿಸಬೇಕು ಅನ್ನೋದನ್ನ ಪಕ್ಷ ತೀರ್ಮಾನ ಮಾಡುತ್ತದೆ. ನಮಗಿಂತ ದೊಡ್ಡವರು ಎಲ್ಲಾ ತೀರ್ಮಾನ ಕೈಗೊಳ್ಳುತ್ತಾರೆ ಎಂದು ಹೇಳಿದರು.

ವೆಬ್ದುನಿಯಾವನ್ನು ಓದಿ

ಸಂಬಂಧಿಸಿದ ಸುದ್ದಿ