ಸಂಕ್ರಮಣ ದಿನ ದುರ್ಘಟನೆ: ಒಂದೇ ಕುಟುಂಬದ ಐವರು ನೀರುಪಾಲು

ಮಂಗಳವಾರ, 15 ಜನವರಿ 2019 (18:44 IST)
ಸಂಕ್ರಾಂತಿ ಹಬ್ಬದ ದಿನದಂದೇ ಐವರು ನೀರುಪಾಲಾಗಿರುವ ದಾರುಣ ಘಟನೆ ನಡೆದಿದೆ.

ಭೀಕರ ರಸ್ತೆ ಅಪಘಾತದಲ್ಲಿ ಒಂದೇ ಕುಟುಂಬದ ಐದು ಜನರು ನೀರುಪಾಲಾಗಿರುವ ಘಟನೆ ಬೆಳಗಾವಿ ಜಿಲ್ಲೆಯ ಸವದತ್ತಿ ತಾಲೂಕಿನ ಕಡಬಿ ಶಿವಾಪುರ ಗ್ರಾಮದಲ್ಲಿ ನಡೆದಿದೆ.

ಅಂತ್ಯಕ್ರಿಯೆ ಮುಗಿಸಿಕೊಂಡು ಮನೆಗೆ ವಾಪಾಸ್ ಆಗುತ್ತಿದ್ದ ಐದು ಜನರಿದ್ದ ಕಾರು ಪಲ್ಟಿಯಾಗಿ ಕಾಲುವೆಗೆ ಬಿದ್ದಿದೆ. ಇದರಿಂದಾಗಿ ಕಾರಿನಲ್ಲಿದ್ದ ಐದೂ ಜನರು ಮುಳುಗಿ ಸಾವನ್ನಪ್ಪಿದ್ದಾರೆ. ಕಡಬಿ ಗ್ರಾಮದ ಒಂದೇ ಕುಟುಂಬದ ನಿವಾಸಿಗಳಾದ ಪಕ್ಕೀರವ್ವ ಪೂಜೇರಿ(29), ಹನುಮಂತ ಪೂಜೇರಿ(60), ಲಗಮಣ್ಣ ಪೂಜೇರಿ(38), ಪಾರವ್ವ ಪೂಜೇರಿ(50), ಲಕ್ಷ್ಮೀ ಪೂಜೇರಿ(40) ಮೃತ ದುರ್ದೈವಿಗಳು ಎಂದು ಗುರುತಿಸಲಾಗಿದೆ.

ಕಾರು ಚಾಲಕ ಅಡಿವೆಪ್ಪ ಮಾಳಗಿ ಕಾರು ಕಾಲುವೆಗೆ ಬೀಳುತ್ತಿದ್ದಂತೆ ಈಜಿ ದಡ ಸೇರುವ ಮೂಲಕ ಬದುಕುಳಿದಿದ್ದಾನೆ.

ವೆಬ್ದುನಿಯಾವನ್ನು ಓದಿ

ಸಂಬಂಧಿಸಿದ ಸುದ್ದಿ