ದೇವರಿಗೆ ಮೊದಲ ಪೂಜೆ ಸಲ್ಲಿಸುವ ವಿಚಾರಕ್ಕೆ ಜೆಡಿಎಸ್ –ಬಿಜೆಪಿ ಕಾರ್ಯಕರ್ತರ ನಡುವೆ ಗಲಾಟೆ

ಶುಕ್ರವಾರ, 17 ಜನವರಿ 2020 (10:00 IST)
ಮಂಡ್ಯ : ಮಂಡ್ಯ ಜಿಲ್ಲೆಯ ಕೆಆರ್ ಪೇಟೆ ತಾಲೂಕಿನ ಬಿಲ್ಲೇನಹಳ್ಳಿ ಗವಿರಂಗನಾಥಸ್ವಾಮಿ ರಥೋತ್ಸವದ ವೇಳೆ ಪೂಜೆ ಸಲ್ಲಿಸುವ ವಿಚಾರಕ್ಕೆ ಜೆಡಿಎಸ್ –ಬಿಜೆಪಿ ಕಾರ್ಯಕರ್ತರ ನಡುವೆ ಗಲಾಟೆ ನಡೆದಿದೆ.



ಗವಿರಂಗನಾಥಸ್ವಾಮಿ ರಥೋತ್ಸವದ ವೇಳೆ ದೇವರಿಗೆ ಮೊದಲ ಪೂಜೆ ಸಲ್ಲಿಸುವ ವಿಚಾರಕ್ಕೆ ಬಿಜೆಪಿ ಶಾಸಕ ನಾರಾಯಣಗೌಡ ಬೆಂಬಲಿಗರು ಹಾಗೂ ಜೆಡಿಎಸ್ ತಾಲೂಕು ಪಂಚಾಯಿತಿ ಸದಸ್ಯ ದಿನೇಶ್ ಬೆಂಬಲಿಗರ ನಡುವೆ ವಾಗ್ದಾಳಿ ನಡೆದಿದೆ.


ತಕ್ಷಣ ಪೊಲೀಸರು ಮಧ್ಯ ಪ್ರವೇಶಿಸಿ ಪರಿಸ್ಥಿತಿಯನ್ನು ತಿಳಿಗೊಳಸಿದ್ದಾರೆ. ಬಳಿಕ ಶಾಸಕ ನಾರಾಯಣಗೌಡರು ಮೊದಲ ಪೂಜೆ ಸಲ್ಲಿಸಿದ್ದಾರೆ.

ವೆಬ್ದುನಿಯಾವನ್ನು ಓದಿ

ಸಂಬಂಧಿಸಿದ ಸುದ್ದಿ