ಬಂತೂ.. ಬಂತೂ.. ಅಂತೂ ಇಂತೂ ಕೇಂದ್ರದಿಂದ ಪರಿಹಾರ ಬಂತು!

ಮಂಗಳವಾರ, 7 ಜನವರಿ 2020 (16:08 IST)
ಬೆಂಗಳೂರು: ನೆರೆ ಪರಿಹಾರಕ್ಕೆ ಕೇಂದ್ರಕ್ಕೆ ಎಷ್ಟೇ ಮನವಿ ಸಲ್ಲಿಸಿದರೂ ಕಿವಿಗೊಡುತ್ತಿಲ್ಲ ಎಂಬ ಪ್ರತಿಪಕ್ಷಗಳ ಆರೋಪಗಳಿಗೆ ಉತ್ತರ ಸಿಕ್ಕಿದೆ. ಕೇಂದ್ರ ನೆರೆ ಪರಿಹಾರಕ್ಕೆ ಹೆಚ್ಚುವರಿ ಹಣ ಬಿಡುಗಡೆ ಮಾಡಿದೆ ಎಂದು ಸಿಎಂ ಬಿಎಸ್ ಯಡಿಯೂರಪ್ಪ ಘೋಷಿಸಿದ್ದಾರೆ.

 

ಮೊನ್ನೆಯಷ್ಟೇ ಪ್ರಧಾನಿ ಮೋದಿ ರಾಜ್ಯಕ್ಕೆ ಭೇಟಿ ನೀಡಿದ್ದಾಗ ಸಿಎಂ ಬಹಿರಂಗವಾಗಿಯೇ ನೆರೆ ಪರಿಹಾರಕ್ಕೆ ಮನವಿ ಸಲ್ಲಿಸಿದ್ದರು. ಆದರೆ ಇದಕ್ಕೆ ಆಗ ಪ್ರಧಾನಿ ಮೌನವಾಗಿದ್ದಿದ್ದು ಟೀಕೆಗೆ ಗುರಿಯಾಗಿತ್ತು.

ಇದೀಗ ಕೇಂದ್ರದಿಂದ ಪರಿಹಾರ ಹಣ ಬಂದಿರುವುದಾಗಿ ಸಿಎಂ ಘೋಷಿಸಿದ್ದಾರೆ. ಆದರೆ ಎಷ್ಟು ಹಣ ಬಂದಿದೆ ಎಂಬುದನ್ನು ಸಿಎಂ ಬಹಿರಂಗಪಡಿಸಿಲ್ಲ. ಸದ್ಯದಲ್ಲೇ ಹೆಚ್ಚುವರಿ ಪರಿಹಾರ ಹಣವನ್ನು ಅರ್ಹರಿಗೆ ಹಂಚಿಕೆ ಮಾಡುವುದಾಗಿ ಸಿಎಂ ಹೇಳಿದ್ದಾರೆ.

ವೆಬ್ದುನಿಯಾವನ್ನು ಓದಿ

ಸಂಬಂಧಿಸಿದ ಸುದ್ದಿ