ನಾಲ್ವರು ಪೊಲೀಸರ ವಿರುದ್ಧ FIR ದಾಖಲು

ಗುರುವಾರ, 27 ಅಕ್ಟೋಬರ್ 2022 (18:56 IST)
ಇಸ್ಪೀಟ್  ಅಡ್ಡೆ ಮೇಲೆ ಪೊಲೀಸರು ರೇಡ್ ನೆಪದಲ್ಲಿ ಹಣ ದೋಚಿದ್ದಾರೆ ಎಂದು ಆರೋಪಿಸಲಾಗಿದೆ. ವಿಜಯನಗರ ಜಿಲ್ಲೆಯ ಹೊಸಪೇಟೆ ಪಟ್ಟಣದ ಹಳೆ KEB ಹಿಂಭಾಗದಲ್ಲಿ ಈ ಘಟನೆ ನಡೆದಿದೆ. ಪೊಲೀಸರು ಇಸ್ಪಿಟ್ ಅಡ್ಡೆ ಮೇಲೆ ದಾಳಿ ನಡೆಸಿ, ಹಣ ಮೊಬೈಲ್ ವಶಪಡಿಸಿಕೊಂಡು ಕೇಸ್ ದಾಖಲಿಸದೇ ನಿರ್ಲಕ್ಷ್ಯ ತೋರಿದ್ದಾರೆ ಎಂದು ಆರೋಪ ಮಾಡಲಾಗಿದೆ. ನಾಲ್ವರು ಪೊಲೀಸ್​​​ ಪೇದೆಗಳ ವಿರುದ್ಧ FIR ದಾಖಲಾಗಿದೆ. ಮಂಜುನಾಥ್, ಶ್ರೀಕಾಂತ್ ಮೇಟಿ, ಅಭಿಷೇಕ್, ಮಹೇಶ್ ಬಂಧಿತ ಪೊಲೀಸ್ ಪೇದೆಗಳಾಗಿದ್ದಾರೆ. ಹೊಸಪೇಟೆಯ ಪಟ್ಟಣ ಪೊಲೀಸ್ ಠಾಣೆಯಲ್ಲಿ ಈ ಪೇದೆಗಳು ಕರ್ತವ್ಯ ನಿರ್ವಹಿಸುತ್ತಿದ್ದು, S.P. ಡಾ. ಅರುಣ್​​​​​​​​ ನಾಲ್ವರು ಪೇದೆಗಳನ್ನು ಅಮಾನತುಗೊಳಿಸಿ ಆದೇಶಿಸಿದ್ದಾರೆ. ಈ ಸಂಬಂಧ ಹೊಸಪೇಟೆಯ ಪಟ್ಟಣ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

ವೆಬ್ದುನಿಯಾವನ್ನು ಓದಿ

ಸಂಬಂಧಿಸಿದ ಸುದ್ದಿ