ಪೆಟ್ರೋಲ್ ಟ್ಯಾಂಕರ್ ಗೆ ಹತ್ತಿದ ಬೆಂಕಿ: ಅನಾಹುತ

ಗುರುವಾರ, 17 ಜನವರಿ 2019 (19:00 IST)
ಪೆಟ್ರೋಲ್ ಬಂಕ್ ಬಳಿ‌ ನಿಂತಿದ್ದ ಪೆಟ್ರೋಲ್ ತುಂಬಿದ ಲಾರಿಯಲ್ಲಿ ಏಕಾಏಕಿ ಬೆಂಕಿ ಹೊತ್ತಿಕೊಂಡ ಘಟನೆ ನಡೆದಿದೆ.

ಪೆಟ್ರೋಲ್ ಟ್ಯಾಂಕರ್ ಗೆ ಆಕಸ್ಮಿಕ ಬೆಂಕಿ ತಗುಲಿದ್ದು, ಇಬ್ಬರಿಗೆ ಗಂಭೀರ ಗಾಯಗಳಾದ ಘಟನೆ ಸಂಭವಿಸಿದೆ.

ಚಿತ್ರದುರ್ಗ ನಗರದ ಗಾಯಿತ್ರಿ ಕಲ್ಯಾಣ ಮಂಟಪದ ಬಳಿ ಇರುವ ಎಸ್ ಟಿ ಆರ್ ಪೆಟ್ರೋಲ್ ಬಂಕ್ ನಲ್ಲಿ ಈ ದುರ್ಘಟನೆ ಸಂಭವಿಸಿದೆ.

ಚಾಲಕ ಮಜೀದ್(65), ನೌಷಾದ್(28) ಗಾಯಾಳುಗಳಾಗಿದ್ದು, ಅವರನ್ನು ಆಸ್ಪತ್ರೆಗೆ ದಾಖಲು ಮಾಡಲಾಗಿದೆ.
ಇಂಡಿಯನ್ ಆಯಿಲ್ ಕಾರ್ಪೊರೇಶನ್ ಗೆ ಸೇರಿದ ಪಟ್ರೋಲ್ ಬಂಕ್ ಇದಾಗಿದ್ದು, ಪೆಟ್ರೋಲ್ ಬಂಕ್ ಬಳಿ‌ ನಿಂತಿದ್ದಾಗ ಏಕಾಏಕಿ ಬೆಂಕಿ ಹೊತ್ತಿಕೊಂಡಿದೆ. ಸ್ವಲ್ಪದರಲ್ಲೇ ಭಾರಿ ಅನಾಹುತ ತಪ್ಪಿದಂತಾಗಿದ್ದು, ಮೂರು ಅಗ್ನಿಶಾಮಕ ವಾಹನಗಳಿಂದ ಕಾರ್ಯಾಚರಣೆ ನಡೆಸಿ ಬೆಂಕಿ ನಂದಿಸಲಾಯಿತು.



ವೆಬ್ದುನಿಯಾವನ್ನು ಓದಿ

ಸಂಬಂಧಿಸಿದ ಸುದ್ದಿ