ಬೆಂಕಿ ದುರಂತಕ್ಕೆ ನಲುಗಿದ ಮುಂಬೈ

ಬುಧವಾರ, 22 ಆಗಸ್ಟ್ 2018 (20:11 IST)
ಜನವಸತಿ ಕಟ್ಟಡದಲ್ಲಿ ಏಕಾಏಕಿಯಾಗಿ ಕಾಣಿಸಿಕೊಂಡ ಬೆಂಕಿ ಪರಿಣಾಮ 4 ಜನರು ಸಾವನ್ನಪ್ಪಿ, 15 ಕ್ಕೂ ಹೆಚ್ಚು ಜನರು ಗಾಯಗೊಂಡ ಘಟನೆ ನಡೆದಿದೆ.

ಮುಂಬೈನ ದಾದರ್ ಪ್ರದೇಶದಲ್ಲಿನ ಜನವಸತಿ ಪ್ರದೇಶದಲ್ಲಿ ಬೆಂಕಿ ಅವಘಡ ಸಂಭವಿಸಿದೆ. ಕ್ರಿಸ್ಟಲ್ ಕಟ್ಟಡದಲ್ಲಿ ಬೆಂಕಿ ಕಾಣಿಸಿಕೊಂಡ ಪರಿಣಾಮ ಕಟ್ಟಡದಲ್ಲಿದ್ದ 4 ಜನರು ಸಾವನ್ನಪ್ಪಿದ್ದಾರೆ. ಹದಿನೈದಕ್ಕೂ ಹೆಚ್ಚು ಜನರು ಗಾಯಗೊಂಡಿದ್ದಾರೆ.


ಸ್ಥಳದಲ್ಲಿಯೇ ನಾಲ್ವರು ಸಜೀವ ದಹನವಾಗಿದ್ದಾರೆ. ಅಗ್ನಿ ಶಾಮಕ  ಸಿಬ್ಬಂದಿ ಬೆಂಕಿ ನಂದಿಸುವಲ್ಲಿ ಹರಸಾಹಸ ಪಡಬೇಕಾಯಿತು.

ವೆಬ್ದುನಿಯಾವನ್ನು ಓದಿ

ಸಂಬಂಧಿಸಿದ ಸುದ್ದಿ