ನದಿಯಲ್ಲಿ ಈಜಲು ತೆರಳಿದ್ದ ಐವರು ಬಾಲಕರು ನೀರುಪಾಲು

ಮಂಗಳವಾರ, 7 ನವೆಂಬರ್ 2017 (10:17 IST)
ಮಂಗಳೂರು: ಬಂಟ್ವಾಳ ತಾಲೂಕಿನ ಅರಳ ಗ್ರಾಮದ ಮುಲಾರಪಟ್ನದಲ್ಲಿ ನಿನ್ನೆ ಈಜಲು ತೆರಳಿದ್ದ ಐವರು ಬಾಲಕರು ನೀರು ಪಾಲಾಗಿರುವ ಘಟನೆ ನಡೆದಿದೆ. ಇಂದು ಬೆಳಗ್ಗೆಯಿಂದಲೂ ತೀವ್ರ ಹುಡುಕಾಟ ನಡೆಸುತ್ತಿದ್ದು, ಓರ್ವನ ಶವ ಪತ್ತೆಯಾಗಿದೆ.

ಶುಂಠಿಹಿತ್ಲು ನಿವಾಸಿ ಅಸ್ಲಾಂ(17), ರಮೀಝ್(16), ಅಜಾಮತ್‌(15), ಮುಭಾಷಿರ್‌(16), ಸಮಾದ್‌(17) ನೀರುಪಾಲಾದ ಬಾಲಕರು ಎನ್ನಲಾಗಿದೆ. ನಿನ್ನೆ ಬೆಳಗ್ಗೆ 11 ಗಂಟೆ ಸುಮಾರಿಗೆ ಐವರು ಬಾಲಕರು ಈಜಲು ತೆರಳಿದ್ದು, ರಾತ್ರಿಯಾದರೂ ಮನೆಗೆ ವಾಪಸ್ ಬಂದಿರಲಿಲ್ಲ. ಇದರಿಂದ ಅನುಮಾನಗೊಂಡ ಪೋಷಕರು ಮೊಬೈಲ್‌ ಗೆ ಫೋನ್ ಮಾಡಿದರೆ ರಿಂಗ್ ಆಗುತ್ತಿದ್ದು, ಯಾರೂ ಕರೆ ಸ್ರೀಕರಿಸಲಿಲ್ಲ.

ಹುಡುಕಾಟ ನಡೆಸಿದಾಗ ಫಲ್ಗುಣಿ ನದಿ ಬಳಿ ಬಟ್ಟೆಗಳು ಪತ್ತೆಯಾಗಿದ್ದು, ನೀರು ಪಾಲಾಗಿರುವ ಶಂಕೆಯಲ್ಲಿ ನದಿಯಲ್ಲಿ ಹುಡುಕಾಟ ನಡೆಸುತ್ತಿದ್ದಾರೆ. ಈ ಕುರಿತು ಬಂಟ್ವಾಳ ಗ್ರಾಮಾಂತರ ಠಾಣಾ ಪೊಲೀಸರು ಶೋಧಕಾರ್ಯ ನಡೆಸಿದ್ದಾರೆ.

ವೆಬ್ದುನಿಯಾವನ್ನು ಓದಿ

ಸಂಬಂಧಿಸಿದ ಸುದ್ದಿ