ಭೀಕರ ರಸ್ತೆ ಅಪಘಾತ: ಹಬ್ಬಕ್ಕೆ ಹೊರಟಿದ್ದ ಮೂವರು ಸೇರಿ ಐವರು ಸಾವು

ಗುರುವಾರ, 19 ಅಕ್ಟೋಬರ್ 2017 (20:45 IST)
ಬೆಂಗಳೂರು: ದೀಪಾವಳಿ ಹಬ್ಬದ ಆಚರಣೆಗೆ ಊರಿಗೆ ತೆರಳುತ್ತಿದ್ದ ಭೀಕರ ರಸ್ತೆ ಅಪಘಾತದಲ್ಲಿ ಒಂದೇ ಕುಟುಂಬದ ಮೂವರು ಸೇರಿದಂತೆ ಐವರು ಮೃತಪಟ್ಟಿರುವ ಘಟನೆ ನೆಲಮಂಗಲ ಸಮೀಪದ ಬೈಚಾಪುರ ಗ್ರಾಮದ ಬಳಿ ನಡೆದಿದೆ.

ಸ್ಕಾರ್ಪಿಯೋ ಕಾರಿನಲ್ಲಿದ್ದ ಕೆಂಪರಾಜು(40), ಮಕ್ಕಳಾದ ಸೌಮ್ಯ(10), ಸಂಜಯ್(2), ಸಾಜನ್(24) ಮತ್ತು ನವನೀದ್(25) ಮೃತರು. ನಾಲ್ವರಿಗೆ ಗಾಯಗಳಾಗಿದ್ದು, ಕೆಂಪರಾಜು ಪತ್ನಿ ಮಮತಾ(30) ಸ್ಥಿತಿ ಗಂಭೀರವಾಗಿದೆ. ನಾಲ್ವರು ಗಾಯಾಳುಗಳನ್ನು ವಿಕ್ಟೋರಿಯಾ ಆಸ್ಪತ್ರೆಗೆ ದಾಖಲಿಸಲಾಗಿದೆ.

ಸ್ಕಾರ್ಪಿಯೋದಲ್ಲಿ 6 ಮಂದಿ ಬೆಂಗಳೂರಿನ  ನಾಗವಾರ ನಿವಾಸಿಗಳು ಚುಂಚಿಫಾಲ್ಸ್ ಗೆ ತೆರಳುತ್ತಿದ್ದರು. ಈ ವೇಳೆ ಚಾಲಕನ ನಿಯಂತ್ರಣ ತಪ್ಪಿದ ಕಾರು, ರಸ್ತೆ ಪಕ್ಕದಲ್ಲಿ ಟೀ ಕುಡಿಯಲು ನಿಲ್ಲಿಸಿದ್ದ ಬೈಕ್ ಗೆ ಡಿಕ್ಕಿ ಹೊಡೆದು ನಂತರ ತಂಗುದಾಣಕ್ಕೆ ಗುದ್ದಿದೆ. ಈ ವೇಳೆ ಕಾರಿನಲ್ಲಿದ್ದ ಮೂವರು, ಇಬ್ಬರು ಬೈಕ್ ಸವಾರರು ಸ್ಥಳದಲ್ಲೇ ಮೃತಪಟ್ಟಿದ್ದಾರೆ. ಮೃತ ಬೈಕ್ ಸವಾರರು, ಬೆಂಗಳೂರಿನ ಹೆಗ್ಗನಹಳ್ಳಿ ನಿವಾಸಿಗಳಾಗಿದ್ದಾರೆ. ಈ ಕುರಿತು ಕುದೂರು ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

ವೆಬ್ದುನಿಯಾವನ್ನು ಓದಿ

ಸಂಬಂಧಿಸಿದ ಸುದ್ದಿ