ಹುಲಿಗೆಮ್ಮ ದೇವಸ್ಥಾನಕ್ಕೆ ಪ್ರವಾಹ ಭೀತಿ

ಗುರುವಾರ, 11 ಆಗಸ್ಟ್ 2022 (18:49 IST)
ತುಂಗಭದ್ರಾ ಜಲಾಶಯದಿಂದ 1 ಲಕ್ಷ 70 ಸಾವಿರ ಕ್ಯೂಸೆಕ್ಸ್ ನೀರು ಬಿಡುಗಡೆಯಾದ ಹಿನ್ನಲೆ, ಕೊಪ್ಪಳ ತಾಲೂಕಿನ ಹುಲಗಿ ಗ್ರಾಮದಲ್ಲಿರುವ ಹುಲಿಗೆಮ್ಮ ದೇವಸ್ಥಾನಕ್ಕೆ ಪ್ರವಾಹದ ಭೀತಿ ಎದುರಾಗಿದೆ. ತುಂಗಭದ್ರಾ ನದಿಯ ಪಕ್ಕದಲ್ಲಿರುವ ಹುಲಿಗೆಮ್ಮ ದೇವಸ್ಥಾನದ ಪಾದಗಟ್ಟೆಗೆ ನೀರು ತಲುಪಿದ್ದು, ಭಕ್ತರು ಅಪಾಯ ಲೆಕ್ಕಿಸದೆ ನದಿಯಲ್ಲಿ ಸ್ನಾನ ಮಾಡುತ್ತಿದ್ದು,  ಪೊಲೀಸ್ ಇಲಾಖೆ ಹಾಗೂ ದೇವಸ್ಥಾನ ಆಡಳಿತ ಮಂಡಳಿಯವರು ಭಕ್ತರನ್ನು ನಿಯಂತ್ರಿಸುವಲ್ಲಿ ವಿಫಲರಾಗಿದ್ದಾರೆ. ಯಾಮಾರಿದ್ರೆ ಅಪಾಯ ಕಟ್ಟಿಟ್ಟ ಬುತ್ತಿ, ಅಪಾರ ಪ್ರಮಾಣದಲ್ಲಿ ನೀರು ಬಿಡುಗಡೆಯಾದ ಹಿನ್ನಲೆ, ತಲೆ ಮುಡಿ ಕೊಡುವ ಕೊಠಡಿಗೆ ನೀರು ನುಗ್ಗಿ ಜಲಾವೃತವಾಗಿದೆ.

ವೆಬ್ದುನಿಯಾವನ್ನು ಓದಿ

ಸಂಬಂಧಿಸಿದ ಸುದ್ದಿ