ಕೊರೊನಾ ವಾರಿಯರ್ಸ್ ಗೆ ಪಾದಪೂಜೆ

ಶನಿವಾರ, 2 ಮೇ 2020 (14:19 IST)
ಕೊರೊನಾ ವಾರಿಯರ್ಸ್ ಗಳಿಗೆ ಪಾದಪೂಜೆ ಮಾಡುವ ಮೂಲಕ ಗೌರವ ಸೂಚಿಸಲಾಗಿದೆ.

ತುಮಕೂರು ಜಿಲ್ಲೆಯ ಕುಣಿಗಲ್ ತಾಲ್ಲೂಕಿನಲ್ಲಿ ಶ್ರೀ ಸಿದ್ಧಲಿಂಗೇಶ್ವರ ಜಯಂತ್ಸೋತ್ಸವ ಸಮಿತಿಯಿಂದ ಕೊರೋನಾ ವಾರಿಯರ್ಸ್ ಗೆ ಪಾದಪೂಜೆ ಮಾಡುವ ಮೂಲಕ ಗೌರವ ಸಲ್ಲಿಸಿದೆ.

ಲಾಕ್ ಡೌನ್ ನಂತರ ಬಡವರ ಹಸಿವು ನೀಗಿಸುವುದಕ್ಕಾಗಿ ಈ ಸಮಿತಿ ದಾಸೋಹವನ್ನು ನಡೆಸಿಕೊಂಡು ಬರುತ್ತಿದೆ.

ಕಾರ್ಮಿಕ ದಿನಾಚರಣೆ ಅಂಗವಾಗಿ ಕೊರೋನಾ ವಾರಿಯರ್ಸ್ ಗಳಾದ ವೈದ್ಯರು, ಆಶಾ ಮತ್ತು ಅಂಗನವಾಡಿ ಕಾರ್ಯಕರ್ತರು ಮತ್ತು ಪೊಲೀಸರ ಪಾದಪೂಜೆ ಮಾಡುವ ಮೂಲಕ ಗೌರವ ಸಲ್ಲಿಸಿದ್ದಾರೆ.


ವೆಬ್ದುನಿಯಾವನ್ನು ಓದಿ

ಸಂಬಂಧಿಸಿದ ಸುದ್ದಿ