ಅಂಬರೀಶ್‌ಗಾಗಿ ಸಚಿವ ಸ್ಥಾನ ಬಿಡಲು ಸಿದ್ದ: ಸಚಿವ ಮಲ್ಲಿಕಾರ್ಜುನ್

ಮಂಗಳವಾರ, 28 ಜೂನ್ 2016 (15:25 IST)
ಮಾಜಿ ಸಚಿವ ಅಂಬರೀಶ್‌ಗೆ ಸಚಿವ ಸ್ಥಾನ ನೀಡುವುದಾದರೆ ನಾನು ಸಚಿವ ಸ್ಥಾನವನ್ನು ತ್ಯಜಿಸಲು ಸಿದ್ದ ಎಂದು ಸಚಿವ ಎಸ್.ಎಸ್.ಮಲ್ಲಿಕಾರ್ಜುನ್ ಘೋಷಿಸಿದ್ದಾರೆ.
 
ಮೇರು ನಟ, ರೆಬೆಲ್ ಸ್ಟಾರ್ ಅಂಬರೀಶ್ ಹಿರಿಯ ನಾಯಕರಾಗಿದ್ದರಿಂದ ಅವರಿಗೆ ಉತ್ತಮ ಸ್ಥಾನ ದೊರೆಯಬೇಕು. ಅವರಿಗಾಗಿ ಸಚಿವ ಸ್ಥಾನ ಬಿಟ್ಟುಕೊಡಲು ನಾನು ಸಿದ್ದವಾಗಿದ್ದೇನೆ ಎಂದು ತಿಳಿಸಿದ್ದಾರೆ.
 
ಅಂಬರೀಶ್‌ಗೆ ಅವರ ಘನತೆ ಗೌರವಕ್ಕೆ ತಕ್ಕಂತೆ ಯಾವುದಾದರೂ ಉತ್ತಮ ಸ್ಥಾನ ನೀಡುವಂತೆ ಮುಖ್ಯಮಂತ್ರಿ ಸಿದ್ದರಾಮಯ್ಯ ಮತ್ತು ಹೈಕಮಾಂಡ್ ನಾಯಕರಿಗೆ ಮನವಿ ಮಾಡಿದ್ದೇನೆ ಎಂದು ಹೇಳಿದ್ದಾರೆ.
 
ಮುರುಘಾ ಮಠಕ್ಕೆ ಭೇಟಿ ನೀಡಿ ಶ್ರೀಗಳ ಆಶೀರ್ವಾದ ಪಡೆದ ಸಚಿವ ಮಲ್ಲಿಕಾರ್ಜುನ್, ಎಲ್ಲರಲ್ಲೂ ಶರಣರನ್ನು ಕಾಣಬೇಕಾಗಿದೆ. ಶ್ರೀಗಳ ಆಶೀರ್ವಾದ ದೊರೆತಿದ್ದರಿಂದ ತುಂಬಾ ಸಂತೋಷವಾಗಿದೆ ಎಂದಿದ್ದಾರೆ.  
 
ಸಿಎಂ ಸಿದ್ದರಾಮಯ್ಯ ಉತ್ತಮವಾಗಿ ಕಾರ್ಯನಿರ್ವಹಿಸುತ್ತಿರುವುದರಿಂದ ಯಾವುದೇ ಕಾರಣಕ್ಕೂ ನಾಯಕತ್ವ ಬದಲಾವಣೆ ಸಾಧ್ಯವಿಲ್ಲ. ರಾಜ್ಯ ಸರಕಾರ ಜನಪರವಾಗಿ ಕಾರ್ಯನಿರ್ವಹಿಸುತ್ತದೆ ಎಂದು ಸಚಿವ ಎಸ್.ಎಸ್.ಮಲ್ಲಿಕಾರ್ಜುನ್ ತಿಳಿಸಿದ್ದಾರೆ.  

ತಾಜಾ ಸುದ್ದಿಗಳಿಗಾಗಿ ವೆಬ್ ದುನಿಯಾ ಮೊಬೈಲ್ ಆ್ಯಪ್ ಡೌನ್‌ಲೋಡ್ ಮಾಡಿಕೊಳ್ಳಿ.

ವೆಬ್ದುನಿಯಾವನ್ನು ಓದಿ