ಕಾಂಗ್ರೆಸ್‌ ನಾಯಕರಿಗೆ ಕಾವೇರಿಗಿಂತ ಬಿಬಿಎಂಪಿ ಚುನಾವಣೆ ಹೆಚ್ಚಾಯ್ತಾ: ಬಿಜೆಪಿ ಆಕ್ರೋಶ

ಬುಧವಾರ, 28 ಸೆಪ್ಟಂಬರ್ 2016 (14:32 IST)
ಕಾವೇರಿ ನದಿ ನೀರು ಹಂಚಿಕೆ ವಿವಾದಕ್ಕಿಂತ ಬಿಬಿಎಂಪಿ ಮೇಯರ್ ಹಾಗೂ ಉಪಮೇಯರ್ ಚುನಾವಣೆಯೇ ನಿಮಗೆ ಹೆಚ್ಚಾಯ್ತಾ ಎಂದು ಕಾಂಗ್ರೆಸ್ ವಿರುದ್ಧ ಬಿಜೆಪಿ ಆಕ್ರೋಶ ವ್ಯಕ್ತಪಡಿಸಿದೆ.
 
ಕಾವೇರಿ ನದಿಯಿಂದ ತಮಿಳುನಾಡಿಗೆ ನೀರು ಹರಿಸುವಂತೆ ಮತ್ತೆ ಸುಪ್ರೀಂಕೋರ್ಟ್ ಆದೇಶ ನೀಡಿರುವ ಹಿನ್ನೆಲೆಯಲ್ಲಿ ಇಂದು ಮುಂಜಾನೆ ಮುಖ್ಯಮಂತ್ರಿ ಸಿದ್ದರಾಮಯ್ಯ ನೇತೃತ್ವದಲ್ಲಿ ಸರ್ವಪಕ್ಷ ಸಭೆ ನಡೆಯಿತು. ಆದೆರೆ, ಕಾಂಗ್ರೆಸ್‌ನ ಕೆಲ ಸಚಿವರು ಸರ್ವಪಕ್ಷ ಸಭೆ ನಡೆಯುತ್ತಿದ್ದರು ಬಿಬಿಎಂಪಿ ಮೇಯರ್ ಹಾಗೂ ಉಪಮೇಯರ್ ಚುನಾವಣೆಗೆ ಹಾಜರ್ ಆಗಿದ್ದಕ್ಕೆ ಆಕ್ರೋಶ ವ್ಯಕ್ತವಾಗಿದೆ 
 
ಕೆಪಿಸಿಸಿ ಅಧ್ಯಕ್ಷ ಹಾಗೂ ರಾಜ್ಯ ಗೃಹ ಖಾತೆ ಸಚಿವ ಡಾ.ಜಿ.ಪರಮೇಶ್ವರ್ ಹಾಗೂ ರಾಜ್ಯಸಭಾ ಸದಸ್ಯ ಅಸ್ಕರ್ ಫರ್ನಾಂಡಿಸ್ ಹಾಗೂ ಕೆಲವು ನಾಯಕರು ಬಿಬಿಎಂಪಿ ಮೇಯರ್ ಹಾಗೂ ಉಪಮೇಯರ್ ಚುನಾವಣೆಯಲ್ಲಿ ಪಾಲ್ಗೊಂಡಿದ್ದರು. 
 
ಕಾವೇರಿ ವಿವಾದಕ್ಕೆ ಸಂಬಂಧಿಸಿದಂತೆ ಇಂದು ಕರೆಯಲಾಗಿದ್ದ ಸರ್ವಪಕ್ಷ ಸಭೆ ನಡೆಯುತ್ತಿದ್ದರು, ಬಿಬಿಎಂಪಿ ಚುನಾವಣೆಗೆ ಹಾಜರ್ ಆಗಿದ್ದ ಕಾರಣ ಕಾಂಗ್ರೆಸ್ ನಾಯಕರ ವಿರುದ್ಧ ಆಕ್ರೋಶ ವ್ಯಕ್ತಪಡಿಸಿರುವ ಬಿಜೆಪಿ, ಕಾವೇರಿ ವಿವಾದಕ್ಕಿಂತ ನಿಮಗೆ ಕಾಂಗ್ರೆಸ್‌ನವರಿಗೆ ಚುನಾವಣೆಯೇ ಮುಖ್ಯ ಎಂದು ಆರೋಪಿಸಿದೆ. 

ತಾಜಾ ಸುದ್ದಿಗಳನ್ನು ಓದಲು ವೆಬ್‌ದುನಿಯಾ ಮೊಬೈಲ್ ಆ್ಯಪ್ ಡೌನ್‍ಲೋಡ್ ಮಾಡಿಕೊಳ್ಳಿ

ವೆಬ್ದುನಿಯಾವನ್ನು ಓದಿ