ಎಸ್.ಎಂ.ಕೃಷ್ಣ ರಾಜೀನಾಮೆಗೆ ಶನಿಯ ಪ್ರಭಾವವೇ ಕಾರಣ: ಪೂಜಾರಿ

ಗುರುವಾರ, 2 ಫೆಬ್ರವರಿ 2017 (12:34 IST)
ಮಾಜಿ ಮುಖ್ಯಮಂತ್ರಿ ಎಸ್.ಎಂ.ಕೃಷ್ಣ ರಾಜೀನಾಮೆಗೆ ಶನಿಯ ಪ್ರಭಾವವೇ ಕಾರಣ ಎಂದು ಹಿರಿಯ ಕಾಂಗ್ರೆಸ್ ನಾಯಕ ಜನಾರ್ದನ ಪೂಜಾರಿ ಅವರು ಮುಖ್ಯಮಂತ್ರಿ ಸಿದ್ದರಾಮಯ್ಯರಿಗೆ ಟಾಂಗ್ ನೀಡಿದ್ದಾರೆ.
ಮಂಗಳೂರಿನಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ರಾಜ್ಯ ಕಾಂಗ್ರೆಸ್ ಪಕ್ಷಕ್ಕೆ ಶನಿ ಹಿಡಿದಿದೆ ಎಂದು ಈಗಾಗಲೇ ಹೇಳಿದ್ದೇನೆ. ಎಸ್.ಎಂ.ಕೃಷ್ಣ ರಾಜೀನಾಮೆಗೆ ಶನಿಯ ಪ್ರಭಾವವೇ ಕಾರಣ. ಕೃಷ್ಣ ಅವರನ್ನು ಮನವೊಲಿಸಿ ಪಕ್ಷಕ್ಕೆ ಮರಳಿ ಕರೆತರದಿದ್ದರೆ ಸಿಎಂ ಸಿದ್ದರಾಮಯ್ಯ ಮನೆಗೆ ಹೋಗಬೇಕಾಗುತ್ತದೆ ಎಂದು ವಾಗ್ದಾಳಿ ನಡೆಸಿದರು.

ಕಾಂಗ್ರೆಸ್ ಕಾರ್ಯಕರ್ತರ ಕುರಿತು ಎಸ್.ಎಂ.ಕೃಷ್ಣರಲ್ಲಿ ಜಿಗುಪ್ಸೆ ಇತ್ತು. ಆರು ಕೋಟಿ ಜನರ ನಿರೀಕ್ಷೆ ಎನ್ನುವುದು ಅವರಿಗೆ ಗೊತ್ತಿರಬೇಕು. ಇದರಲ್ಲಿ ಕೆಪಿಸಿಸಿ ಅಧ್ಯಕ್ಷ ಡಾ.ಜಿ.ಪರಮೇಶ್ವರ್ ಅವರದ್ದು ತಪ್ಪಿದೆ ಎಂದರು. 
 
ರಾಜ್ಯದಲ್ಲಿ ದಲಿತ ಅಭ್ಯರ್ಥಿ ಮುಖ್ಯಮಂತ್ರಿಯಾಗಬೇಕೆಂದು ಜನರು ಅಪೇಕ್ಷಿಸುತ್ತಿದ್ದಾರೆ. ಆದರೆ, ಇದಕ್ಕೆ ಪಕ್ಷದವರು ತಡೆಯೊಡ್ಡುತ್ತಿದ್ದಾರೆ ಎಂದು ಕಾಂಗ್ರೆಸ್ ನಾಯಕ ಜನಾರ್ದನ ಪೂಜಾರಿ ದೂರಿದರು. 
 
ತಮ್ಮ ಹಿರಿತನವನ್ನು ನಿರ್ಲಕ್ಷಿಸಿದ ಹಿನ್ನೆಲೆಯಲ್ಲಿ ಬೇಸರಕೊಂಡಿದ್ದ ಎಸ್.ಎಂ.ಕೃಷ್ಣ ಅವರು, ಜನವರಿ 28 ರಂದು ಎಐಸಿಸಿ ಅಧ್ಯಕ್ಷೆ ಸೋನಿಯಾ ಗಾಂಧಿ ಅವರಿಗೆ ರಾಜೀನಾಮೆ ಪತ್ರ ರವಾನಿಸಿದ್ದರು. 

ತಾಜಾ ಸುದ್ದಿಗಳನ್ನು ಓದಲು ವೆಬ್‌ದುನಿಯಾ ಮೊಬೈಲ್ ಆ್ಯಪ್ ಡೌನ್‍ಲೋಡ್ ಮಾಡಿಕೊಳ್ಳಿ

ವೆಬ್ದುನಿಯಾವನ್ನು ಓದಿ