ಐಟಿ ದಾಳಿಗೂ, ನನಗೂ ಯಾವುದೇ ಸಂಬಂಧ ಇಲ್ಲ - ಪುಟ್ಟರಾಜು ಆರೋಪಕ್ಕೆ ತಿರುಗೇಟು ನೀಡಿದ ಸುಮಲತಾ

ಗುರುವಾರ, 28 ಮಾರ್ಚ್ 2019 (12:19 IST)
ಬೆಂಗಳೂರು : ಬಿಜೆಪಿ ಬೆಂಬಲಿತ ಅಭ್ಯರ್ಥಿ ಸುಮಲತಾ ಅವರೇ  ಐಟಿ ದಾಳಿ ಮಾಡಿಸಿದ್ದಾರೆ ಎಂದು ಸಚಿವ ಸಿಎಸ್ ಪುಟ್ಟರಾಜು ಆರೋಪಿಸಿರುವ  ಹಿನ್ನಲೆಯಲ್ಲಿ ಆದಾಯ ತೆರಿಗೆ ಇಲಾಖೆ ಅಧಿಕಾರಿಗಳ ದಾಳಿಗೂ, ನನಗೂ ಯಾವುದೇ ಸಂಬಂಧ ಇಲ್ಲ ಎಂದು ಮಂಡ್ಯ ಲೋಕಸಭಾ ಪಕ್ಷೇತರ ಅಭ್ಯರ್ಥಿ ಸುಮಲತಾ ಅಂಬರೀಶ್ ಸ್ಪಷ್ಟ ಪಡಿಸಿದ್ದಾರೆ.


ಇಂದು ಬೆಳ್ಳಂಬೆಳಿಗ್ಗೆ ಸಚಿವ ಸಿ.ಎಸ್. ಪುಟ್ಟರಾಜು ಹಾಗೂ ಅವರ ಸಂಬಂಧಿಕರ ಮನೆ ಮೇಲೆ ಐಟಿ ಅಧಿಕಾರಿಗಳು ದಾಳಿ ನಡೆಸಿದ್ದರು.  ಈ ಬಗ್ಗೆ ಆಕ್ರೊಶ ವ್ಯಕ್ತಪಡಿಸಿದ ಸಚಿವರು, ‘ಮಂಡ್ಯ ಲೋಕಸಭಾ ಕ್ಷೇತ್ರದ ಬಿಜೆಪಿ ಬೆಂಬಲಿತ ಪಕ್ಷೇತರ ಅಭ್ಯರ್ಥಿ ದೂರು ನೀಡಿದ ಬಳಿಕ ಈ ದಾಳಿ ನಡೆಸಲಾಗಿದೆ. ಇದರ ಹಿಂದೆ ಅವರ ಕೈವಾಡವಿದೆ ಎಂದು ಪರೋಕ್ಷವಾಗಿ ಸುಮಲತಾ ಅವರ ಮೇಲೆ ಆರೋಪ ಮಾಡಿದ್ದಾರೆ.


ಈ ಕುರಿತು ಮಾಧ್ಯಮಗಳಿಗೆ ಹೇಳಿಕೆ ನೀಡಿರುವ ಸುಮಲತಾ ಅಂಬರೀಶ್, ಐಟಿ ದಾಳಿಯ ಬಗ್ಗೆ ಏನೆಂದು ಉತ್ತರಿಸುವುದೆಂದು ತಿಳಿಯುತ್ತಿಲ್ಲ. ಐಟಿ ದಾಳಿಗೂ ನನಗೂ ಯಾವುದೇ ಸಂಬಂಧ ಇಲ್ಲ. ನನಗೆ ಅಷ್ಟೊಂದು ಪವರ್ ಇದೆ ಅಂದ್ರೆ ಸಂತೋಷ. ಆದರೆ ನಮ್ಮ ಕುಟುಂಬಕ್ಕೆ ಪುಟ್ಟರಾಜು ಆತ್ಮೀಯರಾಗಿದ್ದರು. ನೆನ್ನೆ ಮೊನ್ನೆಯವರೆಗೆ ಅಕ್ಕ ಎಂದು ಕರೆಯುತಿದ್ದರು. ನಾನು ಎಲ್ಲಿಯೂ ಸಚಿವ ಸಿಎಸ್ ಪುಟ್ಟರಾಜು ಹೆಸರು ಪ್ರಸ್ತಾಪ ಮಾಡಿಲ್ಲ ಎಂದು ಹೇಳಿದ್ದಾರೆ.


.
ತಾಜಾ ಸುದ್ದಿಗಳನ್ನು ಓದಲು ವೆಬ್‌ದುನಿಯಾ ಮೊಬೈಲ್ ಆ್ಯಪ್ ಡೌನ್‍ ಲೋಡ್ ಮಾಡಿಕೊಳ್ಳಿ.


 

ವೆಬ್ದುನಿಯಾವನ್ನು ಓದಿ

ಸಂಬಂಧಿಸಿದ ಸುದ್ದಿ