ಸಚಿವ ಉಮೇಶ್ ಕತ್ತಿ ದಿಢೀರ್ ನಿಧನಕ್ಕೆ ಗೃಹ ಸಚಿವ ಶ್ರೀ ಆರಗ ಜ್ಞಾನೇಂದ್ರ ಕಂಬನಿ

ಬುಧವಾರ, 7 ಸೆಪ್ಟಂಬರ್ 2022 (19:34 IST)
ಭಾರತೀಯ ಜನತಾ ಪಕ್ಷದ ಹಿರಿಯ ನಾಯಕರೂ ಹಾಗೂ ಸಂಪುಟ ಸಹೋದ್ಯೋಗಿಯೂ ಆಗಿದ್ದ ಶ್ರೀ ಉಮೇಶ್ ಕತ್ತಿಯವರ ಧಿಡೀರ್ ನಿಧನದ ಸುದ್ದಿ ತಿಳಿದು, ದಿಗ್ಭ್ರಮೆಗೊಂಡಿದ್ದಾರೆ.ಕರ್ನಾಟಕ ವಿಧಾನಸಭೆಯ ಅತ್ಯಂತ ಹಿರಿಯ ನಾಯಕರು ಒಬ್ಬರಾಗಿದ್ದರು, ಅನುಭವಿ ಹಾಗೂ ಉತ್ಸಾಹಿ ರಾಜಕಾರಣಿ ಹಾಗೂ ಉತ್ತರ ಕರ್ನಾಟಕ ಭಾಗದ ಜನತೆಯ ದ್ವನಿಯಾಗಿದ್ದ ಉಮೇಶ್ ಕತ್ತಿಯವರ ನಿಧನದಿಂದ ರಾಜ್ಯಕ್ಕೆ ವಿಶೇಷವಾಗಿ ಉತ್ತರ ಕರ್ನಾಟಕ ಭಾಗಕ್ಕೆ ತುಂಬಲಾರದ ತುತ್ತಾಗಿದೆ. ನಷ್ಟವಾಗಿದೆ ಎಂದು ಆರಗಜ್ಞಾನೇಂದ್ರ ಹೇಳಿದ್ದಾರೆ.
 
ದಿವಂಗತರ ಚಿರಶಾಂತಿ ದೊರಕಲಿ ಹಾಗೂ ಅವರ ಕುಟುಂಬ ವರ್ಗಕ್ಕೆ ಆತ್ಮವನ್ನು ಭರಿಸುವ ಶಕ್ತಿ ಭಗವಂತ ನೀಡಲಿ, ಎಂದು ಪ್ರಾರ್ಥಿಸುತ್ತೇನೆ ಎಂದು ಆರಗಜ್ಞಾನೇಂದ್ರ ಸಂತಾಪ ಸೂಚಿಸಿದ್ದಾರೆ.

ವೆಬ್ದುನಿಯಾವನ್ನು ಓದಿ

ಸಂಬಂಧಿಸಿದ ಸುದ್ದಿ