ಈ ಕಾರಣದಿಂದ ಶ್ರೀಗಳ ಕ್ರಿಯಾ ಸಮಾಧಿ ಪ್ರಕ್ರಿಯೆಗೆ ಪ್ರಧಾನಿ ಮೋದಿ ಆಗಮಿಸುವುದಿಲ್ಲವಂತೆ

ಮಂಗಳವಾರ, 22 ಜನವರಿ 2019 (12:27 IST)
ತುಮಕೂರು : ನಡೆದಾಡುವ ದೇವರು ಸಿದ್ಧಗಂಗೆಯ ಶ್ರೀ ಶಿವಕುಮಾರ ಸ್ವಾಮೀಜಿ ಅವರ  ಕ್ರಿಯಾ ಸಮಾಧಿ ಪ್ರಕ್ರಿಯೆಗೆ ಪ್ರಧಾನಿ  ಮೋದಿ ಅವರು ಆಗಮಿಸುವುದಿಲ್ಲ ಎಂಬುದಾಗಿ ತಿಳಿದುಬಂದಿದೆ.


ಸಿದ್ಧಗಂಗೆಯ ಶ್ರೀ ಶಿವಕುಮಾರ ಸ್ವಾಮೀಜಿ ಅವರ ಕ್ರಿಯಾ ಸಮಾಧಿ ಪ್ರಕ್ರಿಯೆ ಇಂದು ಸಂಜೆ ಐದು ಗಂಟೆಗೆ ನೆರವೇರುತ್ತಿದ್ದು, ಈ ಕ್ರಿಯೆಗೆ ಪ್ರಧಾನಿ ನರೇಂದ್ರ ಮೋದಿ ಅವರು ಗೈರಾಗುತ್ತಿದ್ದು, ಭದ್ರತಾ ಕಾರಣಗಳ ಹಿನ್ನೆಲೆಯಲ್ಲಿ ಪ್ರಧಾನಿ ಭೇಟಿಗೆ ವಿಶೇಷ ಭದ್ರತಾ ಪಡೆ (ಎಸ್​ಪಿಜಿ) ಸಮ್ಮತಿ ನೀಡಿಲ್ಲ ಎನ್ನಲಾಗಿದೆ. ಆದರೆ ಕೇಂದ್ರದ ಪ್ರತಿನಿಧಿಯಾಗಿ ನಿರ್ಮಲಾ ಸೀತಾರಾಮನ್​ ಅವರು ಆಗಮಿಸಿಲಿದ್ದಾರೆ ಎನ್ನಲಾಗಿದೆ.


'ಶ್ರೀಗಳ ಅಂತಿಮ ದರ್ಶನಕ್ಕೆ ಅಪಾರ ಸಂಖ್ಯೆಯಲ್ಲಿ ಭಕ್ತರು ಮಠಕ್ಕೆ ಬರುತ್ತಿದ್ದಾರೆ. ಈ ಹಿನ್ನೆಲೆಯಲ್ಲಿ ಪ್ರಧಾನಿ ಮೋದಿ ಅವರು ಶ್ರೀಗಳ ದರ್ಶನಕ್ಕೆ ಬಂದರೆ ಸಾರ್ವಜನಿಕರಿಗೆ ತೊಂದರೆ ಆಗಬಹುದು ಎಂಬ ಕಾರಣಕ್ಕೆ ಪ್ರಧಾನಿ ಮೋದಿ ಬರುವುದು ಅನುಮಾನ' ಎಂದು ಈಗಾಗಲೇ ಬಿ.ಎಸ್ ಯಡಿಯೂರಪ್ಪ ತಿಳಿಸಿದ್ದಾರೆ.


ತಾಜಾ ಸುದ್ದಿಗಳನ್ನು ಓದಲು ವೆಬ್‌ದುನಿಯಾ ಮೊಬೈಲ್ ಆ್ಯಪ್ ಡೌನ್‍ ಲೋಡ್ ಮಾಡಿಕೊಳ್ಳಿ.

ವೆಬ್ದುನಿಯಾವನ್ನು ಓದಿ

ಸಂಬಂಧಿಸಿದ ಸುದ್ದಿ