ರೈತರ ಮೇಲೆ ಅರಣ್ಯ ಇಲಾಖೆ ದರ್ಪ

ಶನಿವಾರ, 1 ಏಪ್ರಿಲ್ 2023 (16:30 IST)
ತುಮಕೂರಿನಲ್ಲಿ ಅರಣ್ಯ ಇಲಾಖೆ ಅಧಿಕಾರಿಗಳು ರೈತರ ಮೇಲೆ ಲಾಠಿ ಚಾರ್ಜ್​ ನಡೆಸಿ, ದರ್ಪ ತೋರಿದ್ದಾರೆ. ಬಗರ್ ಹುಕುಂ ಜಮೀನು ರೈತರ ಮೇಲೆ ಅರಣ್ಯ ಇಲಾಖೆ ಅಧಿಕಾರಿಗಳು ದರ್ಪ ತೋರಿದ್ದು, ತುಮಕೂರು ಜಿಲ್ಲೆ ಗುಬ್ಬಿ ತಾಲೂಕಿನ ಗಂಗಯ್ಯನಪಾಳ್ಯದಲ್ಲಿ ಈ ಘಟನೆ ನಡೆದಿದೆ. ಟ್ರಂಚ್ ಹೊಡೆಯೋದನ್ನ ತಡೆದ ರೈತರ ಮೇಲೆ ಅರಣ್ಯ ಇಲಾಖೆ ಸಿಬ್ಬಂದಿ ಲಾಠಿ ಪ್ರಹಾರ ನಡೆಸಿ, ವಿಕೃತಿ ಮೆರೆದಿದ್ದಾರೆ. ಲಾಠಿಚಾರ್ಜ್​​ನಲ್ಲಿ ರೈತರ ತಲೆಗೆ ಪೆಟ್ಟಾಗಿದ್ದು, ಮಹಿಳೆಯರಿಗೂ ಗಾಯಗಳಾಗಿವೆ. ಗುಬ್ಬಿ ತಾಲೂಕು ಆಸ್ಪತ್ರೆಯಲ್ಲಿ ರೈತರಿಗೆ ಚಿಕಿತ್ಸೆ ನೀಡಲಾಗ್ತಿದೆ. ಗುಬ್ಬಿ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಘಟನೆ ನಡೆದಿದೆ

ವೆಬ್ದುನಿಯಾವನ್ನು ಓದಿ

ಸಂಬಂಧಿಸಿದ ಸುದ್ದಿ