ಚಿರತೆ ಸೆರೆಗೆ ಟಾಸ್ಕ್ ಫೋರ್ಸ್ ರಚನೆ

ಬುಧವಾರ, 25 ಜನವರಿ 2023 (18:39 IST)
ರಾಜ್ಯದಲ್ಲಿ ಚಿರತೆಗಳ ಹಾವಳಿ ಜೋರಾಗಿದೆ. ರಸ್ತಯಲ್ಲಿ ಓಡಾಡಲು ಸಾರ್ವಜನಿಕರು ಭಯಪಡಬೇಕಾದ ಪರಿಸ್ಥಿತಿ ಎದುರಾಗಿದೆ. ಮೈಸೂರಿನ ಟಿ.ನರಸೀಪುರದಲ್ಲಿ ಚಿರತೆಯ ಕಾಟ ಹಿನ್ನೆಲೆ ಚಿರತೆ ದಾಳಿ ಪ್ರಕರಣಗಳ ಕುರಿತು ಸಿಎಂ ಚರ್ಚೆ ನಡೆಸಿದ್ದಾರೆ. ಅರಣ್ಯ ಇಲಾಖೆ & ಮೈಸೂರು ಜಿಲ್ಲಾಡಳಿತದೊಂದಿಗೆ ಸಿಎಂ ಚರ್ಚೆ ನಡೆಸಿದ್ದು ಚಿರತೆ ಸೆರೆ ಹಿಡಿಯಲು ಎಲ್ಲಾ ಕ್ರಮ ಕೈಗೊಳ್ಳುವಂತೆ ಸೂಚಿಸಿದ್ದಾರೆ. ಈ ಕುರಿತು ಸಭೆಯಲ್ಲಿ ಮಾತನಾಡಿದ ಸಿಎಂ, ಚಿರತೆ ಸೆರೆಹಿಡಿಯಲು ಟಾಸ್ಕ್ ಫೋರ್ಸ್ ರಚನೆ ಮಾಡುವಂತೆ ಸೂಚಿಸಿದ್ರು. ಇಲ್ಲಿಯವರೆಗೂ ಚಿರತೆ ದಾಳಿಯಿಂದ ಸಂಭವಿಸಿದ ಸಾವು-ನೋವಿನ ಬಗ್ಗೆ ಸಿಎಂ ಬಸವರಾಜ ಬೊಮ್ಮಾಯಿ ಕಳವಳ ವ್ಯಕ್ತಪಡಿಸಿದ್ದಾರೆ. 

ವೆಬ್ದುನಿಯಾವನ್ನು ಓದಿ

ಸಂಬಂಧಿಸಿದ ಸುದ್ದಿ