ಮಾಜಿ ಸಿಎಂ ಬಿಎಸ್​ವೈ ಹುಟ್ಟುಹಬ್ಬ : ರೈತರಿಗೆ ಟ್ರಾಕ್ಟರ್ ನೀಡುವ ಮೂಲಕ ಆಚರಣೆ

ಭಾನುವಾರ, 27 ಫೆಬ್ರವರಿ 2022 (18:48 IST)
ಬೆಂಗಳೂರು : ಮಾಜಿ ಮುಖ್ಯಮಂತ್ರಿ ಬಿಎಸ್ ಯಡಿಯೂರಪ್ಪ ಅವರು ಇಂದು 79ನೇ ಹುಟ್ಟುಹಬ್ಬದ ಪ್ರಯುಕ್ತ ಯಾವುದೇ ವೈಭವದ ಸಮಾರಂಭ ಮಾಡದೆ 11 ರೈತರಿಗೆ ಟ್ರಾಕ್ಟರ್ ನೋಡುವ ಮೂಲಕ ಆಚರಣೆ ಮಾಡಿಕೊಳ್ಳುತ್ತಿದ್ದಾರೆ.
ಇಂದು ಸಿದ್ದಗಂಗಾ ಮಠದ ಶ್ರೀಗಳ ಸಮ್ಮುಖದಲ್ಲಿ ಮಾಜಿ ಸಿಎಂ ಬಿಎಸ್ ಯಡಿಯೂರಪ್ಪ ಹುಟ್ಟುಹಬ್ಬ ಆಚರಣೆ ಮಾಡಲಿದ್ದು, ಕಾವೇರಿ ನಿವಾಸದಲ್ಲಿ ಅಭಿಮಾನಿಗಳು ಸೇರಿದ್ದಾರೆ.
ಹಾಗೂ ಬೃಹತ್ ಕೇಕ್ ಕಟ್ ಮಾಡಲಿದ್ದಾರೆ, ಇದೆ ಸಂದರ್ಭದಲ್ಲಿ ರೈತರಿಗೆ ಒಟ್ಟು 11 ಟ್ರಾಕ್ಟರ್ ಗಿಫ್ಟ್ ನೀಡಲಿದ್ದಾರೆ.
ಬೆಳಿಗ್ಗೆ ಹುಟ್ಟುಹಬ್ಬದ ಪ್ರಯುಕ್ತ ಸಂಜಯನಗರದ ರಾಧಕಷ್ಣ ದೇವಸ್ಥನಕ್ಕೆ ಭೇಟಿ ನೀಡಿ ಪೂಜೆ ಸಲ್ಲಿಸಿದರು, ಇದೆ ಸಂದರ್ಭದಲ್ಲಿ ಬಿಡಿಎ ಅಧ್ಯಕ್ಷ ಎಸ್.ಆರ್.ವಿಶ್ವನಾಥ್,ಶಾಸಕ ವೈ.ಎ.ನಾರಾಯಣ ಸ್ವಾಮಿ,ಮಾಜಿ‌ ಸಚಿವ ಕಟ್ಟಾ ಸುಬ್ರಮಣ್ಯ ನಾಯ್ಡು ಪೂಜೆಯಲ್ಲಿ ಪಾಲ್ಗೊಂಡಿದ್ದರು.

ವೆಬ್ದುನಿಯಾವನ್ನು ಓದಿ

ಸಂಬಂಧಿಸಿದ ಸುದ್ದಿ